ಇನ್ನೊಂದೆಡೆ ಸೋಂಕು ಶಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಕ್ವಾರಂಟೈನ್ ಕೇಂದ್ರಗಳಲ್ಲಿ ಸ್ಥಳದ ಸಮಸ್ಯೆ ತಲೆದೋರಿದೆ. ಹೀಗಾಗಿ ಎಲ್ಲರನ್ನೂ 14 ದಿನಗಳು ಕ್ವಾರಂಟೈನ್ಗೆ ಒಳಪಡಿಸುವ ನಿಯಮವನ್ನು ಆರೋಗ್ಯ ಇಲಾಖೆ ಕೈಬಿಟ್ಟಿದೆ. ಮಹಾರಾಷ್ಟ್ರ, ಗುಜರಾತ್, ದೆಹಲಿ, ತಮಿಳುನಾಡು, ರಾಜಸ್ಥಾನ ಹಾಗೂ ಮಧ್ಯಪ್ರದೇಶವನ್ನು ಅಧಿಕ ಅಪಾಯದ ರಾಜ್ಯಗಳು ಎಂದು ಗುರುತಿಸಲಾಗಿದ್ದು, ಅಲ್ಲಿಂದಬಂದವರನ್ನು ಮಾತ್ರ ಇನ್ನುಮುಂದೆ 7 ದಿನಗಳು ಕ್ವಾರಂಟೈನ್ ಕೇಂದ್ರಗಳಲ್ಲಿ ಇರಿಸಲಾಗುತ್ತದೆ.