ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ ಹೊರಡಿಸಿದ ಎಲ್ಲಾ ಸಮನ್ಸ್ಗಳನ್ನು ಮತ್ತು ಕೈಗೊಂಡಿ
ರುವ ಕ್ರಮಗಳನ್ನು ರದ್ದುಪಡಿಸಬೇಕು ಎಂದು ಕಾರ್ತಿ ಚಿದಂಬರಂ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಪ್ರಕರಣದಲ್ಲಿ ಮಧ್ಯಂತರ ಪರಿಹಾರಕ್ಕಾಗಿ ದೆಹಲಿ ಹೈಕೋರ್ಟ್ನ ಮೊರೆ ಹೋಗುವಂತೆ ಕಾರ್ತಿ ಚಿದಂಬರಂಗೆ ಸುಪ್ರೀಂ ಕೋರ್ಟ್ ಗುರುವಾರ ಬೆಳಿಗ್ಗೆ
ಯಷ್ಟೇ ಸೂಚಿಸಿತ್ತು. ಜತೆಗೆ ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಉಳಿದಿರುವ ತಮ್ಮ ಅರ್ಜಿಗಳನ್ನು ವಾಪಸ್ ಪಡೆಯಲೂ ಕಾರ್ತಿಗೆ ಪೀಠ ಅವಕಾಶ ನೀಡಿತ್ತು.
ಈ ಪ್ರಕರಣದಲ್ಲಿ ಮಧ್ಯಂತರ ಪರಿಹಾರ ನೀಡಲು ಸುಪ್ರೀಂ ಕೋರ್ಟ್ ಇದೇ 6ರಂದು ನಿರಾಕರಿಸಿತ್ತು.