ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತೃಪ್ತ ಶಾಸಕರ ಅರ್ಜಿ ವಿಚಾರಣೆ ಇಂದು

Last Updated 15 ಜುಲೈ 2019, 19:52 IST
ಅಕ್ಷರ ಗಾತ್ರ

ನವದೆಹಲಿ: ರಾಜೀನಾಮೆ ಕುರಿತು ಸ್ಪೀಕರ್‌ಗೆ ನಿರ್ದೇಶನ ನೀಡುವಂತೆ ಕೋರಿ 10 ಜನ ಅತೃಪ್ತ ಶಾಸಕರು ಸಲ್ಲಿಸಿದ್ದ ಮೇಲ್ಮನವಿಯೊಂದಿಗೆ ಇತರ ಐವರು ಶಾಸಕರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಸಮ್ಮತಿ ಸೂಚಿಸಿದ್ದು, ಮಂಗಳವಾರ ವಿಚಾರಣೆ ನಡೆಯಲಿದೆ.

ರಾಜೀನಾಮೆ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುವಂತೆ ಸ್ಪೀಕರ್ ಕೆ.ಆರ್‌. ರಮೇಶಕುಮಾರ್‌ ಅವರಿಗೆ ಸೂಚಿಸಬೇಕು ಎಂದು ಶಾಸಕರಾದ ಆನಂದ್‌ ಸಿಂಗ್‌, ಕೆ.ಸುಧಾಕರ್, ರೋಷನ್‌ ಬೇಗ್‌, ಎಂಟಿಬಿ ನಾಗರಾಜ್‌ ಮತ್ತು ಮುನಿರತ್ನ ಕಳೆದ ಶನಿವಾರ ಮೇಲ್ಮನವಿ ಸಲ್ಲಿಸಿದ್ದರು.

ಈಗಾಗಲೇ ಜೆಡಿಎಸ್‌ ಮತ್ತು ಕಾಂಗ್ರೆಸ್‌ನ ಇತರ 10 ಜನ ಅತೃಪ್ತ ಶಾಸಕರು ಸಲ್ಲಿಸಿರುವ ಅರ್ಜಿಯೊಂದಿಗೆ ಈ ಅರ್ಜಿಯನ್ನೂ ವಿಚಾರಣೆಗೆ ಪರಿಗಣಿಸುವಂತೆ ಹಿರಿಯ ವಕೀಲ ಮುಕುಲ್‌ ರೋಹಟ್ಗಿ ಸೋಮವಾರ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಪೀಠ‌ದ ಎದುರು ಮನವಿ ಮಾಡಿದರು. ಮಂಗಳವಾರದ ವಿಚಾರಣೆ ವೇಳೆ ಈ ಅರ್ಜಿಗಳನ್ನೂ ಪರಿಗಣಿಸಲಾಗುವುದು ಎಂದು ನ್ಯಾಯಪೀಠ ಸಮ್ಮತಿ ನೀಡಿತು.

ರಾಜೀನಾಮೆ ಮತ್ತು ಅನರ್ಹತೆ ಪ್ರಕರಣಗಳಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕಳೆದ ಶುಕ್ರವಾರವೇ ಆದೇಶ ನೀಡಿದ್ದ ನ್ಯಾಯಪೀಠ, ಮಂಗಳವಾರಕ್ಕೆ ವಿಚಾರಣೆ ಮುಂದೂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT