ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶ್ರೀರಾಮುಲು ಮೊದಲು ಕಾಂಗ್ರೆಸ್ನಲ್ಲಿ ಇದ್ದವರು. ಕಾರ್ಯಕರ್ತರಾಗಿ ಉತ್ತಮ ಕೆಲಸ ಮಾಡಿದ್ದರು. ಹಲವು ಚುನಾವಣೆಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಸ್ಪರ್ಧೆ ಮಾಡಿದ್ದರು. ಕಾಂಗ್ರೆಸ್ನಲ್ಲಿ ಇದ್ದವರು ಬೇರೆ ಪಕ್ಷಗಳಿಗೂ ಹೋಗಿದ್ದಾರೆ. ಬೇರೆ ಪಕ್ಷದಲ್ಲಿ ಇದ್ದವರು ಕಾಂಗ್ರೆಸ್ಗೂ ಬಂದಿದ್ದಾರೆ. ಇದು ರಾಜಕಾರಣದಲ್ಲಿ ಸಾಮಾನ್ಯ’ ಎಂದರು.