ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಾಮುಲುಗೆ ಆಹ್ವಾನ: ಪಕ್ಷದಲ್ಲಿ ಚರ್ಚೆ ಆಗಿಲ್ಲ

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌
Last Updated 16 ನವೆಂಬರ್ 2018, 17:36 IST
ಅಕ್ಷರ ಗಾತ್ರ

ಬೆಂಗಳೂರು: ಮೊಳಕಾಲ್ಮುರು ಕ್ಷೇತ್ರದ ಬಿಜೆಪಿ ಶಾಸಕ ಬಿ.ಶ್ರೀರಾಮುಲು ಅವರನ್ನು ಕಾಂಗ್ರೆಸ್‌ಗೆ ಆಹ್ವಾನಿಸುವ ಕುರಿತು ಪಕ್ಷದಲ್ಲಿ ಚರ್ಚೆ ಆಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ ಹೇಳಿದರು.

ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶ್ರೀರಾಮುಲು ಮೊದಲು ಕಾಂಗ್ರೆಸ್‌ನಲ್ಲಿ ಇದ್ದವರು. ಕಾರ್ಯಕರ್ತರಾಗಿ ಉತ್ತಮ ಕೆಲಸ ಮಾಡಿದ್ದರು. ಹಲವು ಚುನಾವಣೆಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಸ್ಪರ್ಧೆ ಮಾಡಿದ್ದರು. ಕಾಂಗ್ರೆಸ್‌ನಲ್ಲಿ ಇದ್ದವರು ಬೇರೆ ಪಕ್ಷಗಳಿಗೂ ಹೋಗಿದ್ದಾರೆ. ಬೇರೆ ಪಕ್ಷದಲ್ಲಿ ಇದ್ದವರು ಕಾಂಗ್ರೆಸ್‌ಗೂ ಬಂದಿದ್ದಾರೆ. ಇದು ರಾಜಕಾರಣದಲ್ಲಿ ಸಾಮಾನ್ಯ’ ಎಂದರು.

ಡಿ.ಕೆ. ಶಿವಕುಮಾರ್‌ ಅವರಿಗೆ ಜಾರಿ ನಿರ್ದೇಶನಾಲಯದಿಂದ ಮೂರನೇ ನೋಟಿಸ್‌ ಬಂದಿರುವ ಕುರಿತು ಪ‍್ರತಿಕ್ರಿಯಿಸಿದ ಅವರು, ‘ಇದು ಉದ್ದೇಶಪೂರ್ವಕ ಸಂಚು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆ‍ಪಿ ಅಧ್ಯಕ್ಷ ಅಮಿತ್‌ ಶಾ ಅವರು ಇ.ಡಿ ಹಾಗೂ ಆದಾಯ ತೆರಿಗೆ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT