ಹಿರಿಯ ಪತ್ರಕರ್ತರಾಗಿದ್ದ ದಿ. ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಪುತ್ರರಾದ ಮಧುಕರ್ ಶೆಟ್ಟಿ, ದೆಹಲಿಯ ಜವಾಹರಲಾಲ್ ವಿಶ್ವವಿದ್ಯಾಲಯದಲ್ಲಿ (ಜೆಎನ್ಯು) ಸಮಾಜ ಶಾಸ್ತ್ರ ವಿಷಯದಲ್ಲಿ ಎಂ.ಎ ಮುಗಿಸಿದ್ದರು. 1999ನೇ ಸಾಲಿನ ಐಪಿಎಸ್ ಅಧಿಕಾರಿಯಾದ ಅವರು, 2008ರಲ್ಲಿ ಲೋಕಾಯುಕ್ತ ಸಂಸ್ಥೆಗೆ ಬಂದಿದ್ದರು. ವಿಧಾನಸೌಧದಲ್ಲೇ ಅಂದಿನ ಶಾಸಕ ವೈ. ಸಂಪಂಗಿ ಅವರನ್ನು ಬಂಧಿಸುವ ಮೂಲಕ ಖಡಕ್ ಅಧಿಕಾರಿ ಎನಿಸಿಕೊಂಡಿದ್ದರು.