ತಾಲ್ಲೂಕು ಆರೋಗ್ಯಾಧಿಕಾರಿ ವಿನಾಯಕ ಭಟ್ಟ ಮಾತನಾಡಿ, ಸಾಕಷ್ಟು ಸಂಖ್ಯೆಯಲ್ಲಿ ದೌರ್ಜನ್ಯ ಪ್ರಕರಣಗಳು ನಡೆಯುತ್ತಿದ್ದರೂ, ದಾಖಲಾಗುವ ಪ್ರಮಾಣ ತೀರಾ ಕಡಿಮೆ. ದೌರ್ಜನ್ಯಕ್ಕೊಳಗಾದವರು ಯಾವುದೇ ಹಿಂಜರಿಕೆ ಇಲ್ಲದೇ ಪ್ರಕರಣ ದಾಖಲಿಸಬೇಕು. ಹಾಗಾದಾಗ ಮಾತ್ರ ನ್ಯಾಯ ನೀಡಲು ಸಾಧ್ಯ ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಹೇಮಲತಾ ಮಾತನಾಡಿ, ಮಹಿಳೆಯರು, ಮಕ್ಕಳ ಮೇಲೆ ದೌರ್ಜನ್ಯ ನಡೆದರೆ, ಅದಕ್ಕೆ ಪರಿಹಾರ ಕಲ್ಪಿಸಲು ಗೆಳತಿ ಘಟಕ ಶ್ರಮಿಸಲಿದೆ ಎಂದರು.