ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನಂದ್‌ ಸಿಂಗ್‌ ನಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ: ಡಿ.ಕೆ ಶಿವಕುಮಾರ್‌

Last Updated 1 ಜುಲೈ 2019, 7:59 IST
ಅಕ್ಷರ ಗಾತ್ರ

ಬೆಂಗಳೂರು: ಆನಂದ್‌ ಸಿಂಗ್‌ ಅವರನ್ನು ಸಂಪರ್ಕಿಸಲು ನಾವು ಪ್ರಯತ್ನ ಪಟ್ಟೆವು. ಆದರೆ ಅದು ಸಾಧ್ಯವಾಗಲಿಲ್ಲ ಎಂದು ಸಚಿವ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಆನಂದ್‌ ಸಿಂಗ್‌ ಅವರು ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಇಂದು ಮಾಧ್ಯಮಗಳಲ್ಲಿ ಮುನ್ನೆಲೆಗೆ ಬರುತ್ತಲೇ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ‘ವಿಚಾರ ತಿಳಿದು ಸ್ವಲ್ಪ ಆಶ್ಚರ್ಯವಾಗಿದ್ದು ನಿಜ. ನಾನು ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದೆ. ಆದರೆ, ಸಾಧ್ಯವಾಗಲಿಲ್ಲ. ಅವರು ರಾಜೀನಾಮೆ ನೀಡಿರುವುದು ನಿಜವೋ ಸುಳ್ಳೋ ಎಂಬುದನ್ನು ಒಂದು ಬಾರಿ ಸ್ಪೀಕರ್‌ ಬಳಿ ಮಾತನಾಡಿ ತಿಳಿದುಕೊಳ್ಳುತ್ತೇನೆ,’ ಎಂದುತಿಳಿಸಿದರು.

ಬಳ್ಳಾರಿಯ ವಿಜಯನಗರ ಕ್ಷೇತ್ರ ಕಾಂಗ್ರೆಸ್‌ ಶಾಸಕ ಆನಂದ್‌ ಸಿಂಗ್‌ ಅವರು, ಸ್ಪೀಕರ್‌ ಅವರ ಕಾರ್ಯದರ್ಶಿಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ನಡುವೆ ಅವರು, ರಾಜ್ಯಪಾಲರನ್ನು ಭೇಟಿಯಾಗಿ ಸಮಾಲೋಚನೆಯನ್ನೂ ನಡೆಸಿದ್ದಾರೆ.

ಇದನ್ನೂ ಓದಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT