"ಹಣ ಲೇವಾದೇವಿ ಪ್ರಕರಣಗಳು ದೇಶದ ಆರ್ಥಿಕ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತಿವೆ. ಈ ಪ್ರಕರಣದಲ್ಲಿ ಇನ್ನೂ ಸಮಗ್ರ ತನಿಖೆ ನಡೆದೇ ಇಲ್ಲ. ಆಗಲೇ ಅರ್ಜಿದಾರರು ಸಮನ್ಸ್ ರದ್ದುಗೊಳಿಸಲು ಕೋರಿ ಹೈಕೋರ್ಟ್ ಮೆಟ್ಟಿಲೇರಿರುವುದು ಸಮರ್ಥನೀಯವಲ್ಲ. ಅರ್ಜಿದಾರರ ಮನವಿಗೆ ಕಾನೂನು ಆಧಾರಿತ ಯೋಗ್ಯತೆ ಇಲ್ಲ. ಆದ್ದರಿಂದ ಅರ್ಜಿ ರದ್ದುಗೊಳಿಸಬೇಕು" ಎಂದು ಆಕ್ಷೇಪಣೆಯಲ್ಲಿ ಕೋರಲಾಗಿದೆ.