ಮೈಸೂರು: ಸಚಿವ ಸಿ.ಎಸ್.ಪುಟ್ಟರಾಜು ಅವರ ನಿವಾಸಕ್ಕೆಗುರುವಾರ ಮಧ್ಯಾಹ್ನ ಭೇಟಿ ನೀಡಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಇಲ್ಲಿನ ಬೃಂದಾವನ ಬಡಾವಣೆಯಲ್ಲಿನ ಸಂಕಲ್ಪ ಅಪಾರ್ಟ್ ಮೆಂಟ್ ನಲ್ಲಿರುವ ಅವರ ನಿವಾಸಕ್ಕೆ ಮಧ್ಯಾಹ್ನ1 ಗಂಟೆ ವೇಳೆಗೆ ಬಂದ15 ಅಧಿಕಾರಿಗಳ ತಂಡ,ಸಂಜೆ 4ರವರೆಗೆ ತಪಾಸಣೆ ನಡೆಸಿತು.
ಚುನಾವಣಾಧಿಕಾರಿಗಳನ್ನು ಜತೆಯಲ್ಲಿ ಕರೆದುಕೊಂಡು ಬಂದಿದ್ದ ಐಟಿ ತಂಡ, ಮೈಸೂರಿನಲ್ಲಿರುವ ಆದಾಯ ತೆರಿಗೆ ಇಲಾಖೆ ಕಚೇರಿಯಲ್ಲಿ ಏಪ್ರಿಲ್ 25 ರಂದು ನಡೆಯಲಿರುವಮುಂದಿನ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ ಎಂದು ಮೂಲಗಳು ತಿಳಿಸಿವೆ.