ಐಟಿ ದಾಳಿಯಾದ ಎರಡು ದಿನದ ಬಳಿಕ ಸುದ್ದಿಗಾರರೊಟ್ಟಿಗೆ ಮಾತನಾಡಿದ್ದ ಪರಮೇಶ್ವರ್ ಅವರು, ’ಮನೆಯಲ್ಲಿ ಹಣ ಸಿಕ್ಕರೆ ಅದನ್ನು ನಾನು ಮುಚ್ಚಿಡಲು ಆಗಲ್ಲ. ಹಣವಿದ್ದರೆ ಅದಕ್ಕೆ ಪೂರಕ ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಆದ್ದರಿಂದ, ಐಟಿ ಅಧಿಕಾರಿಗಳು ಕೇಳುವ ಪ್ರಶ್ನೆಗಳಿಗೆ ಉತ್ತರಿಸುವೆ. ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ, ಅಂದು ಹಾಜರಾಗುವೆ‘ ಎಂದು ತಿಳಿಸಿದ್ದರು.