ಶಾಸಕ ರಮೇಶ ಜಾರಕಿಹೊಳಿ ಅವರ ಆಪ್ತ, ಗೋಕಾಕ ತಾಲ್ಲೂಕಿನ ಘಟಪ್ರಭಾದಲ್ಲಿರುವ ಉದ್ಯಮಿ ಜಯಶೀಲ ಶೆಟ್ಟಿ ಅವರ ನಿವಾಸ ಹಾಗೂ ಬಾರ್, ಹೋಟೆಲ್ಗಳ ಮೇಲೆಯೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾಗದ ಪತ್ರಗಳು, ಲಾಕರ್ ಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಬ್ಯಾಂಕ್ ಖಾತೆಗಳ ವಿವರವನ್ನೂ ಪರಿಶೀಲಿಸುತ್ತಿದ್ದಾರೆ. ಬೆಳಿಗ್ಗೆ ಆರಂಭವಾದ ಪರಿಶೀಲನೆ ಸಂಜೆಯ ನಂತರವೂ ಮುಂದುವರಿದಿತ್ತು.