ಶಾಸಕ ರಮೇಶ ಜಾರಕಿಹೊಳಿ ಆಪ್ತ, ಗೋಕಾಕ ತಾಲ್ಲೂಕಿನ ಘಟಪ್ರಭಾದಲ್ಲಿರುವ ಉದ್ಯಮಿ ಜಯಶೀಲ ಶೆಟ್ಟಿ ಅವರ ನಿವಾಸ ಹಾಗೂ ಬಾರ್, ಹೋಟೆಲ್ಗಳ ಮೇಲೆಯೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾಗದ ಪತ್ರಗಳು, ಲಾಕರ್ಗಳ ಮಾಹಿತಿಯನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಬ್ಯಾಂಕ್ ಖಾತೆಗಳ ವಿವರವನ್ನೂ ಪರಿಶೀಲಿಸುತ್ತಿದ್ದಾರೆ. ಸಂಜೆಯ ನಂತರವೂ ತಪಾಸಣೆ ನಡೆದಿತ್ತು.