ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಪಿಗಳು ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದಾರೆ: ಹೆಚ್ಚುವರಿ ಸಾಲಿಸಿಟರ್ ಜನರಲ್

ಪ್ರತಿಪಾದನೆ
Last Updated 4 ಜೂನ್ 2019, 8:34 IST
ಅಕ್ಷರ ಗಾತ್ರ

ಬೆಂಗಳೂರು:‘ಬೆಂಗಳೂರು ಮತ್ತು ನವದೆಹಲಿಯ ವಿವಿಧೆಡೆ 2017ರಲ್ಲಿ ನಡೆಸಿದ ಆದಾಯ ತೆರಿಗೆ (ಐ.ಟಿ) ದಾಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಮತ್ತು ಇತರ ನಾಲ್ವರು ಆರೋಪಿಗಳು ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ’ಎಂದು ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ ಜನಪ್ರತಿನಿಧಿಗಳ ಕೋರ್ಟ್ ಗೆ ತಿಳಿಸಿದರು.

‘ಪ್ರಕರಣದಿಂದ ನಮ್ಮನ್ನು ಕೈಬಿಡಬೇಕು’ ಎಂದು ಕೋರಿ ಪ್ರಕರಣದ ಆರೋಪಿಗಳಾದ ಡಿ.ಕೆ.ಶಿವಕುಮಾರ್, ಎನ್‌.ರಾಜೇಂದ್ರ ಮತ್ತು ಆಂಜನೇಯ ಹನುಮಂತಯ್ಯ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಮಂಗಳವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ನಾವದಗಿ ಅವರು, ‘ಆರೋಪಿಗಳು, ಆದಾಯ ತೆರಿಗೆ ಕಾಯ್ದೆ–1961ರ ವಿವಿಧ ಕಲಂಗಳಡಿ ದಂಡನೀಯ ಅಪರಾಧ ಎಸಗಿದ್ದಾರೆ. ಆದ್ದರಿಂದ ಅವರ ಅರ್ಜಿ ಪರಿಗಣಿಸಬಾರದು’ಎಂದು ಮನವಿ ಮಾಡಿದರು.

ವಿಚಾರಣೆಯನ್ನು ಇದೇ 7ಕ್ಕೆ ಮುಂದೂಡಲಾಗಿದೆ.ವಿಚಾರಣೆ ವೇಳೆ ಡಿ.ಕೆ.ಶಿವಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT