<p><strong>ಬೆಂಗಳೂರು:</strong>ಮನೆಯಲ್ಲಿ ಹಣ ಸಿಕ್ಕರೆ ಅದನ್ನು ನಾನು ಮುಚ್ಚಿಡಲು ಆಗಲ್ಲ. ಹಣವಿದ್ದರೆ ಅದಕ್ಕೆ ಪೂರಕ ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಆದ್ದರಿಂದ, ಐಟಿ ಅಧಿಕಾರಿಗಳು ಕೇಳುವ ಪ್ರಶ್ನೆಗಳಿಗೆ ಉತ್ತರಿಸುವೆ ಎಂದು ಕಾಂಗ್ರೆಸ್ ಮುಖಂಡ ಜಿ.ಪರಮೇಶ್ವರ ಹೇಳಿದರು.</p>.<p>ಆದಾಯ ತೆರಿಗೆ ಇಲಾಖೆ(ಐಟಿ) ದಾಳಿ ನಡೆಸಿದ ಎರಡು ದಿನದ ಬಳಿಕ ಶನಿವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು,ಐಟಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೇನೆ. ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ದಾಖಲಾತಿ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.</p>.<p><strong>* ಇದನ್ನೂ ಓದಿ:<a href="https://www.prajavani.net/stories/stateregional/it-raid-673018.html">ಐ.ಟಿ ದಾಳಿ: ₹100 ಕೋಟಿ ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ</a></strong></p>.<p>ದಾಳಿ ನಡೆದ ದಿನ ಬೆಳಿಗ್ಗೆ ಐಟಿ ಅಧಿಕಾರಿಗಳು ಮನೆಗೆ ಬಂದಿದ್ದಾರೆ. ಆಗ ನಾನು ನನ್ನ ಕ್ಷೇತ್ರದಲ್ಲಿ ಕೆರೆಗೆ ಗಂಗಾ ಪೂಜೆಗೆ ಸಲ್ಲಿಸಲು ತೆರಳಿದ್ದೆ. ಕಾಲೇಜಿನ ಮೇಲೆ ಐಟಿ ದಾಳಿ ನಡೆದಿರುವ ಮಾಹಿತಿ ಬಂತು. ಐಟಿ ಅಧಿಕಾರಿಗಳು ಸರ್ಚ್ ವಾರಂಟ್ ನೀಡಿ ಈ ಬಗ್ಗೆ ತಿಳಿಸಿದರು.ಸಿದ್ಧಾರ್ಥ ಕಾಲೇಜಿನ ದಾಖಲಾತಿ ಪರಿಶೀಲನೆಗೆ ಬಂದಿದ್ದೇವೆ. ಆ ಸಂಸ್ಥೆಯಲ್ಲಿ ತಾವು ಪ್ರಮುಖರಾಗಿದ್ದೀರಿ. ಆದ್ದರಿಂದ, ಪರಿಶೀಲನೆ ನಡೆಸುತ್ತೇವೆ ಎಂದು ತಿಳಿಸಿದ ಅಧಿಕಾರಿಗಳು, ನನ್ನನ್ನು ಅಲ್ಲಿಂದ ಕರೆತಂದರು ಎಂದು ಪರಮೇಶ್ವರ ಮಾಹಿತಿ ನೀಡಿದರು.</p>.<p>ಅಧಿಕಾರಿಗಳು ಪಂಚನಾಮೆ ಮಾಡಿದ್ದಾರೆ. ನನ್ನ ಬಳಿ ಪಂಚನಾಮೆಯನ್ನೂ ಬರೆಸಿಕೊಂಡಿದ್ದಾರೆ. ಇಂದು ಬೆಳಿಗ್ಗೆ 11ಕ್ಕೆ ತುಮಕೂರಿನ ಎಂಜಿನಿಯರಿಂಗ್ ಕಾಲೇಜಿಗೆ ಬರುವಂತೆ ತಿಳಿಸಿದ್ದಾರೆ. ಅಲ್ಲಿಗೆ ಹೋಗುವೆ. ಮಂಗಳವಾರ ವಿಚಾರಣೆಗೆ ಬರುವಂತೆಯೂ ತಿಳಿಸಿದ್ದಾರೆ. ಅವರು ಕೇಳುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುವೆ ಎಂದು ಅವರು ತಿಳಿಸಿದರು.</p>.<p><strong>ತನಿಖೆ ಮುಗಿದ ಬಳಿಕ ಪ್ರತಿಕ್ರಿಯಿಸುವೆ</strong></p>.<p>ಐಟಿ ದಾಳಿ ರಾಜಕೀಯ ಪ್ರೇರಿತವೇ? ಈ ಬಗ್ಗೆ ಏನು ಹೇಳುತ್ತೀರಿ? ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ವಿಚಾರಣೆ ಪೂರ್ಣಗೊಂಡ ಬಳಿಕ, ರಾಜಕೀಯ ಪ್ರೇರಿತವೇ ಅಥವಾ ಮತ್ತೇನೋ ಎಂಬುದನ್ನು ಸೂಕ್ತ ರೀತಿಯಲ್ಲಿತಿಳಿಸುವೆ ಎಂದರು.</p>.<p><strong>ಬಂದ್, ಪ್ರತಿಭಟನೆ ಬೇಡ: ಕಾರ್ಯಕರ್ತರಲ್ಲಿ ಮನವಿ</strong></p>.<p>ಕಾರ್ಯಕರ್ತರು ಕ್ಷೇತ್ರದಲ್ಲಿ ಬಂದ್ ಮಾಡುವುದು ಹಾಗೂ ಪ್ರತಿಭಟನೆ ಮಾಡುವುದು ಬೇಡ ಎಂದು ಹೇಳಿದ ಪರಮೇಶ್ವರ್, ಐಟಿ ಅಧಿಕಾರಿಗಳು ಕಾನೂನು ರೀತಿ ಕ್ರಮ ಕೈಗೊಂಡು ತನಿಖೆ, ವಿಚಾರಣೆ ನಡೆಸುತ್ತಾರೆ. ಅವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸುತ್ತೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಮನೆಯಲ್ಲಿ ಹಣ ಸಿಕ್ಕರೆ ಅದನ್ನು ನಾನು ಮುಚ್ಚಿಡಲು ಆಗಲ್ಲ. ಹಣವಿದ್ದರೆ ಅದಕ್ಕೆ ಪೂರಕ ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಆದ್ದರಿಂದ, ಐಟಿ ಅಧಿಕಾರಿಗಳು ಕೇಳುವ ಪ್ರಶ್ನೆಗಳಿಗೆ ಉತ್ತರಿಸುವೆ ಎಂದು ಕಾಂಗ್ರೆಸ್ ಮುಖಂಡ ಜಿ.ಪರಮೇಶ್ವರ ಹೇಳಿದರು.</p>.<p>ಆದಾಯ ತೆರಿಗೆ ಇಲಾಖೆ(ಐಟಿ) ದಾಳಿ ನಡೆಸಿದ ಎರಡು ದಿನದ ಬಳಿಕ ಶನಿವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು,ಐಟಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೇನೆ. ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ದಾಖಲಾತಿ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.</p>.<p><strong>* ಇದನ್ನೂ ಓದಿ:<a href="https://www.prajavani.net/stories/stateregional/it-raid-673018.html">ಐ.ಟಿ ದಾಳಿ: ₹100 ಕೋಟಿ ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ</a></strong></p>.<p>ದಾಳಿ ನಡೆದ ದಿನ ಬೆಳಿಗ್ಗೆ ಐಟಿ ಅಧಿಕಾರಿಗಳು ಮನೆಗೆ ಬಂದಿದ್ದಾರೆ. ಆಗ ನಾನು ನನ್ನ ಕ್ಷೇತ್ರದಲ್ಲಿ ಕೆರೆಗೆ ಗಂಗಾ ಪೂಜೆಗೆ ಸಲ್ಲಿಸಲು ತೆರಳಿದ್ದೆ. ಕಾಲೇಜಿನ ಮೇಲೆ ಐಟಿ ದಾಳಿ ನಡೆದಿರುವ ಮಾಹಿತಿ ಬಂತು. ಐಟಿ ಅಧಿಕಾರಿಗಳು ಸರ್ಚ್ ವಾರಂಟ್ ನೀಡಿ ಈ ಬಗ್ಗೆ ತಿಳಿಸಿದರು.ಸಿದ್ಧಾರ್ಥ ಕಾಲೇಜಿನ ದಾಖಲಾತಿ ಪರಿಶೀಲನೆಗೆ ಬಂದಿದ್ದೇವೆ. ಆ ಸಂಸ್ಥೆಯಲ್ಲಿ ತಾವು ಪ್ರಮುಖರಾಗಿದ್ದೀರಿ. ಆದ್ದರಿಂದ, ಪರಿಶೀಲನೆ ನಡೆಸುತ್ತೇವೆ ಎಂದು ತಿಳಿಸಿದ ಅಧಿಕಾರಿಗಳು, ನನ್ನನ್ನು ಅಲ್ಲಿಂದ ಕರೆತಂದರು ಎಂದು ಪರಮೇಶ್ವರ ಮಾಹಿತಿ ನೀಡಿದರು.</p>.<p>ಅಧಿಕಾರಿಗಳು ಪಂಚನಾಮೆ ಮಾಡಿದ್ದಾರೆ. ನನ್ನ ಬಳಿ ಪಂಚನಾಮೆಯನ್ನೂ ಬರೆಸಿಕೊಂಡಿದ್ದಾರೆ. ಇಂದು ಬೆಳಿಗ್ಗೆ 11ಕ್ಕೆ ತುಮಕೂರಿನ ಎಂಜಿನಿಯರಿಂಗ್ ಕಾಲೇಜಿಗೆ ಬರುವಂತೆ ತಿಳಿಸಿದ್ದಾರೆ. ಅಲ್ಲಿಗೆ ಹೋಗುವೆ. ಮಂಗಳವಾರ ವಿಚಾರಣೆಗೆ ಬರುವಂತೆಯೂ ತಿಳಿಸಿದ್ದಾರೆ. ಅವರು ಕೇಳುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುವೆ ಎಂದು ಅವರು ತಿಳಿಸಿದರು.</p>.<p><strong>ತನಿಖೆ ಮುಗಿದ ಬಳಿಕ ಪ್ರತಿಕ್ರಿಯಿಸುವೆ</strong></p>.<p>ಐಟಿ ದಾಳಿ ರಾಜಕೀಯ ಪ್ರೇರಿತವೇ? ಈ ಬಗ್ಗೆ ಏನು ಹೇಳುತ್ತೀರಿ? ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ವಿಚಾರಣೆ ಪೂರ್ಣಗೊಂಡ ಬಳಿಕ, ರಾಜಕೀಯ ಪ್ರೇರಿತವೇ ಅಥವಾ ಮತ್ತೇನೋ ಎಂಬುದನ್ನು ಸೂಕ್ತ ರೀತಿಯಲ್ಲಿತಿಳಿಸುವೆ ಎಂದರು.</p>.<p><strong>ಬಂದ್, ಪ್ರತಿಭಟನೆ ಬೇಡ: ಕಾರ್ಯಕರ್ತರಲ್ಲಿ ಮನವಿ</strong></p>.<p>ಕಾರ್ಯಕರ್ತರು ಕ್ಷೇತ್ರದಲ್ಲಿ ಬಂದ್ ಮಾಡುವುದು ಹಾಗೂ ಪ್ರತಿಭಟನೆ ಮಾಡುವುದು ಬೇಡ ಎಂದು ಹೇಳಿದ ಪರಮೇಶ್ವರ್, ಐಟಿ ಅಧಿಕಾರಿಗಳು ಕಾನೂನು ರೀತಿ ಕ್ರಮ ಕೈಗೊಂಡು ತನಿಖೆ, ವಿಚಾರಣೆ ನಡೆಸುತ್ತಾರೆ. ಅವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸುತ್ತೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>