ಜನಸ್ನೇಹಿ, ಉದ್ಯಮ ಸ್ನೇಹಿ ತೆರಿಗೆ ವ್ಯವಸ್ಥೆ ಇರಬೇಕು. ಆದರೆ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತನಿಖೆಯ ನೆಪದಲ್ಲಿ ಸಿದ್ದಾರ್ಥ ಅವರ ಕಂಪನಿಯ ಆಸ್ತಿ, ಶೇರುಗಳನ್ನು ಜಪ್ತಿ ಮಾಡಿಟ್ಡುಕೊಂಡು ಉದ್ಯಮ ನಡೆಸದಂತೆ ಹಿಂಸಿಸಿದ್ದಾರೆ. 50,000 ಜನರಿಗೆ ಉದ್ಯೋಗ ನೀಡಿದ್ದ ಉದ್ಯಮಿ ಕಿರುಕುಳ ತಾಳಲಾರದೇ, ಮರ್ಯಾದೆಗೆ ಅಂಜಿ ಸಾವಿಗೆ ಶರಣಾಗಿದ್ದಾರೆ. ಇಂತಹ ಪ್ರಕರಣ ಮರುಕಳಿಸಬಾರದು. ಈ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.