ಬೆಳಗಾವಿ/ಹುಬ್ಬಳ್ಳಿ: ‘ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗಾಗಿ ಹೂಡಿಕೆದಾರರನ್ನು ಸೆಳೆಯುವ ಉದ್ದೇಶದಿಂದ ಚೀನಾ ಪ್ರವಾಸ ಕೈಗೊಂಡಿದ್ದೆ. ಆದರೆ, ನೆರೆಯಿಂದಾಗಿ ಜನ ಸಂಕಷ್ಟದಲ್ಲಿರುವುದರಿಂದ ಪ್ರವಾಸ ರದ್ದುಪಡಿಸಿದ್ದೇನೆ’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.
ಬೆಳಗಾವಿಯಲ್ಲಿಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ವಿದೇಶ ಪ್ರವಾಸವೆಂದರೆ ಪಾಪದ ಕೆಲಸವೇನ್ರೀ?’ ಎಂದು ಮಾಧ್ಯಮದವರ ವಿರುದ್ಧ ಹರಿಹಾಯ್ದರು.