ಗಜೇಂದ್ರಗಡ (ಗದಗ ಜಿಲ್ಲೆ): ‘ತಾವು ದತ್ತಾತ್ರೇಯ ಬ್ರಾಹ್ಮಣ ಎಂದು ಹೇಳಿಕೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ನ ಬೆಂಬಲ ಸೂಚಿಸಿ, ಸಂಸತ್ತಿನಲ್ಲಿ ಮಸೂದೆ ತರುವುದಕ್ಕೆ ಸಹಮತ ವ್ಯಕ್ತಪಡಿಸಲಿ. ಆಗ, ಅವರನ್ನು ಹಿಂದೂ ಎಂದು ಒಪ್ಪಿಕೊಳ್ಳುತ್ತೇನೆ’ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.