ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಕಾರ್ಯಕ್ರಮವಾಗಿ ಟಿಪ್ಪು ಜಯಂತಿ ಬೇಡ: ಜಗದೀಶ್ ಶೆಟ್ಟರ್

Last Updated 4 ನವೆಂಬರ್ 2018, 8:13 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುವುದು ಬೇಡ ಎಂದು ಬಿಜೆಪಿ ನಾಯಕಜಗದೀಶ್ ಶೆಟ್ಟರ್ ಭಾನುವಾರ ಹೇಳಿದರು.

ಈ ಹಿಂದೆ ಕಾಂಗ್ರೆಸ್ ಸರ್ಕಾರ ಟಿಪ್ಪು ಜಯಂತಿ ಆಚರಿಸುವಾಗ ಅದನ್ನು ಈಗಿನ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿರೋಧಿಸಿದ್ದರು. ಆದರೆ ಈಗ ಆಚರಣೆಗೆ ಮುಂದಾಗಿದ್ದಾರೆ. ಇದಕ್ಕೆ ಕೊಡಗಿನ ಜನರು, ಚಿತ್ರದುರ್ಗ ನಾಯಕ ಸಮುದಾಯದ ಪ್ರಭಲ ವಿರೋಧವಿದೆ‌. ಟಿಪ್ಪು ಜಯಂತಿ ಆದೇಶ ಹಿಂಪಡೆಯಬೇಕಾದ ಮುಖ್ಯಮಂತ್ರಿ ಅದನ್ನು ಬೆಂಬಲಿಸುತ್ತಿದ್ದಾರೆ ಎಂದು ಶೆಟ್ಟರ್ ಹೇಳಿದರು.

ಟಿಪ್ಪು ಜಯಂತಿ ಆಚರಣೆಯನ್ನು ಬಿಜೆಪಿ ಪ್ರಬಲವಾಗಿ ವಿರೋಧಿಸಲಿದೆ. ದೇಶದ್ರೋಹಿ, ಅತ್ಯಾಚಾರಿ ಟಿಪ್ಪುವಿನ ಜಯಂತಿಯನ್ನು ಸರ್ಕಾರವೇ ಮುಂದೆ ನಿಂತು ಯಾಕೆ ಆಚರಿಸಬೇಕು? ಟಿಪ್ಪು ಜಯಂತಿ ಆಚರಿಸಲು ಬಿಜೆಪಿ ಬಿಡುವುದಿಲ್ಲ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT