ರಾಜಧಾನಿ ಬೆಂಗಳೂರು ಮತ್ತು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಜಿಲ್ಲೆ ಹತ್ತಿರ ಇರುವುದರಿಂದಾಗಿ ಜಗ್ಗಿ ವಾಸುದೇವ್ ಅವರು ಜಾಗತಿಕ ಆಧ್ಯಾತ್ಮಕೇಂದ್ರ ಸ್ಥಾಪಿಸಲು ಚಿಕ್ಕಬಳ್ಳಾಪುರ ಆಯ್ಕೆ ಮಾಡಿಕೊಂಡಿದ್ದು, ಕೇಂದ್ರ ಸ್ಥಾಪಿಸುವ ನಿಟ್ಟಿನಲ್ಲಿ ಈಗಾಗಲೇ ಸ್ಥಳೀಯ ಶಾಸಕ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮತ್ತು ಜಗ್ಗಿ ವಾಸುದೇವ್ ಅವರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.