ಈ ಕುರಿತಂತೆ ಸಿಬಿಐ ದಾಖಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ ವಕೀಲ ಪಿ.ಪ್ರಸನ್ನಕುಮಾರ್, ‘ಈ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಆರನೇ ಆರೋಪಿಯಾಗಿದ್ದು, ಈಗಾಗಲೇ ಸಾಕ್ಷಿಗಳ ವಿಚಾರಣೆ ನಡೆಯುತ್ತಿದೆ. ಅಂತೆಯೇ ಐಪಿಸಿ ಕಲಂ 409ರ ಅಡಿಯಲ್ಲಿ ಆರೋಪ ಸಾಬೀತಾದರೆ ಜೀವಾವಧಿ ಶಿಕ್ಷೆ ವಿಧಿಸಬಹುದಾಗಿದೆ’ ಎಂದು ವಿವರಿಸಿರು.