<p><strong>ಬೆಂಗಳೂರು</strong>: ‘ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಪಟ್ಟಿಗೆ ಹೆಸರು ಸೇರ್ಪಡೆ ಸೇವೆಗಳನ್ನು ಸಕಾಲ ಯೋಜನೆಯ ‘ಜನಸೇವಕ’ ಅಡಿ ಒದಗಿಸಲು ಸಂಬಂಧಿಸಿದ ಇಲಾಖೆಗಳು ಸಹಮತ ವ್ಯಕ್ತಪಡಿಸಿವೆ. ಈ ಸೇವೆಗಳನ್ನು ಶೀಘ್ರದಲ್ಲಿ ಜನಸೇವಕ ವ್ಯಾಪ್ತಿಗೆ ತರಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು</p>.<p>ಕೋವಿಡ್ 19 ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿಗದ್ದ ನಾಗರಿಕರ ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವ ‘ಜನಸೇವಕ’ ಯೋಜನೆಯನ್ನು ಮತ್ತೆ ಆರಂಭಿಸುವ ನಿಟ್ಟಿನಲ್ಲಿ ವಿಧಾನಸೌಧದಲ್ಲಿ ಸೋಮವಾರ ನಡೆದ ಅಧಿಕಾರಿಗಳು ಹಾಗೂ ಬೆಂಗಳೂರು ವ್ಯಾಪ್ತಿಯ ಶಾಸಕರ ಸಭೆಯಲ್ಲಿ ಸಚಿವರು ಮಾತನಾಡಿದರು.</p>.<p>ಸದ್ಯ ‘ಜನಸೇವಕ’ ಯೋಜನೆ ಬೆಂಗಳೂರು ನಗರದ ರಾಜಾಜಿನಗರ, ಬೊಮ್ಮನಹಳ್ಳಿ, ಮಹದೇವಪುರ ಮತ್ತು ದಾಸರಹಳ್ಳಿ ವಿಧಾನಸಭಾ ಕ್ಷೇತ್ರಗಳಲ್ಲಿ ಜಾರಿಯಲ್ಲಿದೆ. ಆದಾಯ, ಜಾತಿ ಪ್ರಮಾಣಪತ್ರ, ಹಿರಿಯ ನಾಗರಿಕರ ಪಿಂಚಣಿ, ಕಾರ್ಮಿಕ, ಆರೋಗ್ಯ, ಪೊಲೀಸ್ ಸೇರಿದಂತೆ 50 ಸೇವೆಗಳನ್ನು ಒದಗಿಸಲಾಗುತಿತ್ತು. ಇನ್ನು ಮುಂದೆ ಈ ವ್ಯಾಪ್ತಿಗೆ ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಪಟ್ಟಿಗೆ ಹೆಸರು ನೋಂದಣಿ ಸೇವೆಗಳನ್ನು ತರಲಾಗುವುದು’ ಎಂದು ಸಚಿವರು ಹೇಳಿದರು.</p>.<p>‘ಆಧಾರ್ ಸಂಖ್ಯೆಯು ಇತ್ತೀಚಿಗೆ ಎಲ್ಲ ವ್ಯವಹಾರಕ್ಕೂ ಅಗತ್ಯವಾಗಿದೆ. ಹಿರಿಯ ನಾಗರಿಕರು, ಅಸಹಾಯಕರು ಈ ಸೇವೆಗಳನ್ನು ಪಡೆದುಕೊಳ್ಳಲು ಪರದಾಡುವಂತಾಗಿದೆ. ಇದನ್ನು ಗಣನೆಗೆ ತೆಗೆದುಕೊಂಡು ಆಧಾರ್ ನೋಂದಣಿ ಮತ್ತು ಆಧಾರ್ ತಿದ್ದುಪಡಿ ಸೇವೆಗಳನ್ನು ಕೂಡಾ ಜನಸೇವಕ ವ್ಯಾಪ್ತಿಗೆ ತರಲಾಗುತ್ತಿದೆ’ ಎಂದು ಅವರು ವಿವರಿಸಿದರು.</p>.<p>‘ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ವೃದ್ಧರು, ಅನಾರೋಗ್ಯ ಪೀಡಿತರು ಸುರಕ್ಷಿತವಾಗಿ ಮನೆಯಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಎಲ್ಲ ಸುರಕ್ಷಿತ ಕ್ರಮಗಳನ್ನು ಅನುಸರಿಸಿ ಈ ಸೇವೆಗಳನ್ನು ಮತ್ತೆ ಆರಂಭಿಸುವ ಬಗ್ಗೆ ನಿರ್ಧರಿಸಲಾಗಿದೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.</p>.<p>‘ಜನಸೇವಕ ಯೋಜನೆ ಮತ್ತೆ ಆರಂಭಿಸುವ ಮತ್ತು ಆಧಾರ್ ನೋಂದಣಿಯಂಥ ಸೇವೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಶಾಸಕರು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕು’ ಎಂದು ಸುರೇಶ್ ಕುಮಾರ್ ಮನವಿ ಮಾಡಿದರು.</p>.<p>ಶಾಸಕರಾದ ಸತೀಶ್ ರೆಡ್ಡಿ (ಬೊಮ್ಮನಹಳ್ಳಿ), ಮಂಜುನಾಥ್ (ದಾಸರಹಳ್ಳಿ) ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಪಟ್ಟಿಗೆ ಹೆಸರು ಸೇರ್ಪಡೆ ಸೇವೆಗಳನ್ನು ಸಕಾಲ ಯೋಜನೆಯ ‘ಜನಸೇವಕ’ ಅಡಿ ಒದಗಿಸಲು ಸಂಬಂಧಿಸಿದ ಇಲಾಖೆಗಳು ಸಹಮತ ವ್ಯಕ್ತಪಡಿಸಿವೆ. ಈ ಸೇವೆಗಳನ್ನು ಶೀಘ್ರದಲ್ಲಿ ಜನಸೇವಕ ವ್ಯಾಪ್ತಿಗೆ ತರಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು</p>.<p>ಕೋವಿಡ್ 19 ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿಗದ್ದ ನಾಗರಿಕರ ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವ ‘ಜನಸೇವಕ’ ಯೋಜನೆಯನ್ನು ಮತ್ತೆ ಆರಂಭಿಸುವ ನಿಟ್ಟಿನಲ್ಲಿ ವಿಧಾನಸೌಧದಲ್ಲಿ ಸೋಮವಾರ ನಡೆದ ಅಧಿಕಾರಿಗಳು ಹಾಗೂ ಬೆಂಗಳೂರು ವ್ಯಾಪ್ತಿಯ ಶಾಸಕರ ಸಭೆಯಲ್ಲಿ ಸಚಿವರು ಮಾತನಾಡಿದರು.</p>.<p>ಸದ್ಯ ‘ಜನಸೇವಕ’ ಯೋಜನೆ ಬೆಂಗಳೂರು ನಗರದ ರಾಜಾಜಿನಗರ, ಬೊಮ್ಮನಹಳ್ಳಿ, ಮಹದೇವಪುರ ಮತ್ತು ದಾಸರಹಳ್ಳಿ ವಿಧಾನಸಭಾ ಕ್ಷೇತ್ರಗಳಲ್ಲಿ ಜಾರಿಯಲ್ಲಿದೆ. ಆದಾಯ, ಜಾತಿ ಪ್ರಮಾಣಪತ್ರ, ಹಿರಿಯ ನಾಗರಿಕರ ಪಿಂಚಣಿ, ಕಾರ್ಮಿಕ, ಆರೋಗ್ಯ, ಪೊಲೀಸ್ ಸೇರಿದಂತೆ 50 ಸೇವೆಗಳನ್ನು ಒದಗಿಸಲಾಗುತಿತ್ತು. ಇನ್ನು ಮುಂದೆ ಈ ವ್ಯಾಪ್ತಿಗೆ ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಪಟ್ಟಿಗೆ ಹೆಸರು ನೋಂದಣಿ ಸೇವೆಗಳನ್ನು ತರಲಾಗುವುದು’ ಎಂದು ಸಚಿವರು ಹೇಳಿದರು.</p>.<p>‘ಆಧಾರ್ ಸಂಖ್ಯೆಯು ಇತ್ತೀಚಿಗೆ ಎಲ್ಲ ವ್ಯವಹಾರಕ್ಕೂ ಅಗತ್ಯವಾಗಿದೆ. ಹಿರಿಯ ನಾಗರಿಕರು, ಅಸಹಾಯಕರು ಈ ಸೇವೆಗಳನ್ನು ಪಡೆದುಕೊಳ್ಳಲು ಪರದಾಡುವಂತಾಗಿದೆ. ಇದನ್ನು ಗಣನೆಗೆ ತೆಗೆದುಕೊಂಡು ಆಧಾರ್ ನೋಂದಣಿ ಮತ್ತು ಆಧಾರ್ ತಿದ್ದುಪಡಿ ಸೇವೆಗಳನ್ನು ಕೂಡಾ ಜನಸೇವಕ ವ್ಯಾಪ್ತಿಗೆ ತರಲಾಗುತ್ತಿದೆ’ ಎಂದು ಅವರು ವಿವರಿಸಿದರು.</p>.<p>‘ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ವೃದ್ಧರು, ಅನಾರೋಗ್ಯ ಪೀಡಿತರು ಸುರಕ್ಷಿತವಾಗಿ ಮನೆಯಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಎಲ್ಲ ಸುರಕ್ಷಿತ ಕ್ರಮಗಳನ್ನು ಅನುಸರಿಸಿ ಈ ಸೇವೆಗಳನ್ನು ಮತ್ತೆ ಆರಂಭಿಸುವ ಬಗ್ಗೆ ನಿರ್ಧರಿಸಲಾಗಿದೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.</p>.<p>‘ಜನಸೇವಕ ಯೋಜನೆ ಮತ್ತೆ ಆರಂಭಿಸುವ ಮತ್ತು ಆಧಾರ್ ನೋಂದಣಿಯಂಥ ಸೇವೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಶಾಸಕರು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕು’ ಎಂದು ಸುರೇಶ್ ಕುಮಾರ್ ಮನವಿ ಮಾಡಿದರು.</p>.<p>ಶಾಸಕರಾದ ಸತೀಶ್ ರೆಡ್ಡಿ (ಬೊಮ್ಮನಹಳ್ಳಿ), ಮಂಜುನಾಥ್ (ದಾಸರಹಳ್ಳಿ) ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>