ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುತಾತ್ಮ ಯೋಧನಿಗೆ ಸ್ವಂತ ಜಮೀನು ಇಲ್ಲ: ಸರ್ಕಾರಿ ಭೂಮಿಯಲ್ಲಿ ಅಂತ್ಯಕ್ರಿಯೆ

ಮದ್ದೂರು- ಮಳವಳ್ಳಿ ಮುಖ್ಯ ರಸ್ತೆಯಲ್ಲಿ ಅಂತ್ಯಕ್ರಿಯೆ ನೆರವೇರಿಸುವಂತೆ ಗ್ರಾಮಸ್ಥರ ಒತ್ತಾಯ
Last Updated 15 ಫೆಬ್ರುವರಿ 2019, 7:56 IST
ಅಕ್ಷರ ಗಾತ್ರ

ಮಂಡ್ಯ: ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿ ವೇಳೆ ಹುತಾತ್ಮರಾದ ಜಿಲ್ಲೆಯ ಯೋಧ ಎಚ್‌.ಗುರು ಅವರ ಕುಟುಂಬಕ್ಕೆ ಸ್ವಂತ ಜಮೀನು ಇಲ್ಲದ ಕಾರಣ ಸರ್ಕಾರಿ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ಗುಡಿಗೆರೆ ಎಳನೀರು ಮಾರುಕಟ್ಟೆ ಎದುರು ಇರುವ ಬಿಸಿಎಂ ಹಾಸ್ಟೆಲ್ ಹಿಂಭಾಗದ ಸರ್ಕಾರಿ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದ್ದು,ಜಿಲ್ಲಾಧಿಕಾರಿ ಎನ್.ಮಂಜುಶ್ರೀಸ್ಥಳ ಪರಿಶೀಲನೆ ನಡೆಸಲಿದ್ದಾರೆ.ಆದರೆಮದ್ದೂರು- ಮಳವಳ್ಳಿ ಮುಖ್ಯ ರಸ್ತೆಯಲ್ಲಿ ಅಂತ್ಯಕ್ರಿಯೆ ನೆರವೇರಿಸುವಂತೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ.

ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಬಂದಿ‌ದ್ದಗುರುಕಳೆದ ಭಾನುವಾರವಷ್ಟೇ ಕರ್ತವ್ಯಕ್ಕೆ ತೆರಳಿದ್ದರು.

ಅವರುಸಿಆರ್‌ಪಿಎಫ್‌ಗೆ ಸೇರಿ9 ವರ್ಷವಾಗಿತ್ತು. ಹೆಚ್ಚಿನ ಅವಧಿ ಜಾರ್ಖಂಡ್‌ನಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರನ್ನುಈಚೆಗೆ ಜಮ್ಮು- ಕಾಶ್ಮೀರಕ್ಕೆ ನಿಯೋಜಿಸಲಾಗಿತ್ತು. ಅದಕ್ಕೂ ಮೊದಲು ಜಮ್ಮುವಿನಲ್ಲಿ ಮೂರು ತಿಂಗಳು ತರಬೇತಿ ಪಡೆದಿದ್ದರು. ತರಬೇತಿ ಮುಗಿದ ಬಳಿಕ ತಮ್ಮ ಊರು ಗುಡಿಗೆರೆಗೆ(ಮದ್ದೂರು ತಾಲ್ಲೂಕು) ಬಂದಿದ್ದರು.

ಹೊನ್ನಯ್ಯ- ಚಿಕ್ಕಹೊಳ್ಳಮ್ಮ ದಂಪತಿಯ ಹಿರಿಯ ಪುತ್ರರಾಗಿರುವ ಗುರು ಅವರಿಗೆಕನಕಪುರ ತಾಲ್ಲೂಕು ಸಾಸಲಾಪುರ ಗ್ರಾಮದ ಕಲಾವತಿ ಅವರೊಂದಿಗೆ 8 ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. ಮದುವೆಯ ನಂತರ ಪತ್ನಿಯನ್ನು ಸಾಸಲಾಪುರದಲ್ಲೇ ಬಿಟ್ಟು ಕರ್ತವ್ಯಕ್ಕೆ ತೆರಳಿದ್ದರು.

ಗುರು ಅವರ ತಮ್ಮ ಆನಂದ್‌ಗೃಹ ರಕ್ಷಕ ದಳದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.ಗುರು ತಂದೆ ಹೊನ್ನಯ್ಯ ಅವರು ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

**
ಗುರು ಕೊಂದವರನ್ನು ಬ್ಲಾಸ್ಟ್ ಮಾಡಿ, ದೇಶ ಕಾಯುವವರನ್ನು ಏಕೆ ಕೊಲ್ಲುತ್ತಾರೆ? ಕೊಲೆಗಾರರನ್ನು ಬಿಡಬೇಡಿ.

- ಕಲಾವತಿ, ಹುತಾತ್ಮ ಯೋಧಗುರು ಪತ್ನಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT