ಈ ಸುದ್ದಿ ತಿಳಿಯುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರು, ತೊಪ್ಪನಹಳ್ಳಿ, ಕೆ.ಹೊನ್ನಲಗೆರೆ ಮುಂತಾದ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಕೊಲೆಗಾರರನ್ನು ಬಂಧಿಸುವವರೆಗೆ ವಾಹನ ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ಸಂಜೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ಪ್ರತಿಭಟನೆ ನಡೆಯಿತು. ಹೆದ್ದಾರಿಯ ಎರಡೂ ಕಡೆ 10 ಕಿ.ಮೀವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.