ಎಚ್.ಡಿ.ದೇವೇಗೌಡ (ತುಮಕೂರು), ನಿಖಿಲ್ ಕುಮಾರಸ್ವಾಮಿ (ಮಂಡ್ಯ) ಹಾಗೂ ಪ್ರಜ್ವಲ್ ರೇವಣ್ಣ (ಮಂಡ್ಯ) ಪಕ್ಷದ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿದಿದ್ದು, ಪಟ್ಟಿಯಲ್ಲಿ ಅವರಿಗೆ ಸ್ಥಾನ ಸಿಕ್ಕಿದೆ. ಪಟ್ಟಿಯಲ್ಲಿ ದೇವೇಗೌಡರ ಹೆಸರು ಮೊದಲ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸಿಕ್ಕಿದೆ. ಅವರಿಬ್ಬರು ಪ್ರಚಾರದ ನೇತೃತ್ವ ವಹಿಸಲಿದ್ದು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು, ಮಾಜಿ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳಿಗೆ ಸ್ಥಾನ ಸಿಕ್ಕಿದೆ.