‘ಕಾಂಗ್ರೆಸ್ ಹಾಗೂ ಜೆಡಿಎಸ್ ಜತೆಗೂಡಿ ಚುನಾವಣೆ ಎದುರಿಸುತ್ತಿವೆ. ಹಾಗಾಗಿ, ಜೆಡಿಎಸ್ ಜತೆಗಿನ ಮೈತ್ರಿಯಿಂದ ದೂರ ಸರಿದಿದ್ದೇವೆ’ ಎಂದು ಎನ್. ಮಹೇಶ್ ತಿಳಿಸಿದರು. ಚಾಮರಾಜನಗರ, ಮೈಸೂರು, ಚಿಕ್ಕಬಳ್ಳಾಪುರ, ಬೀದರ್, ಗುಲಬರ್ಗಾ, ಚಿಕ್ಕೋಡಿ ಹಾಗೂ ಬಾಗಲಕೋಟೆ ಕ್ಷೇತ್ರಗಳನ್ನು ಆದ್ಯತೆಯ ಕ್ಷೇತ್ರಗಳೆಂದು ಪರಿಗಣಿಸಿರುವ ಪಕ್ಷ, ಅಲ್ಲಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ನಿರ್ಧರಿಸಿದೆ.