ಮಂಡ್ಯದಲ್ಲಿ ಮೈತ್ರಿ ಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ನ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಕೆಲಸ ಮಾಡುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಸೂಚನೆಯಂತೆ ಸಿದ್ದರಾಮಯ್ಯ ಈ ಸಭೆ ನಡೆಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪರಾಜಿತರಾದ ಎಲ್ಲ ಮುಖಂಡರಿಗೂ ಸಭೆಗೆ ಬರುವಂತೆ ಬುಲಾವ್ ನೀಡಲಾಗಿತ್ತು.