‘ಮಂಡ್ಯ ಕ್ಷೇತ್ರದಲ್ಲಿ ಆಡಳಿತ ಯಂತ್ರದ ದುರುಪಯೋಗ, ಶಾಂತಿ ಸುವ್ಯವಸ್ಥೆಗೆ ಧಕ್ಕೆ, ನೀತಿಸಂಹಿತೆ ಉಲ್ಲಂಘನೆಯಂಥ ಪ್ರಕರಣಗಳು ವರದಿಯಾಗುತ್ತಿವೆ. ಚುನಾವಣೆ ವೇಳೆ ಹಣದ ಹೊಳೆಯೇ ಹರಿಯುವ ಸಾಧ್ಯತೆ ಇದೆ. ಚುನಾವಣೆ ಶಾಂತಿಯುತವಾಗಿ ನಡೆಯಲು ಬಿಗಿ ಬಂದೋಬಸ್ತ್ ಮಾಡಬೇಕು. ಈ ಕ್ಷೇತ್ರವನ್ನು ಅತಿ ಸೂಕ್ಷ್ಮ ಎಂದು ಆಯೋಗ ಘೋಷಿಸಬೇಕು’ ಎಂದು ಆಗ್ರಹಿಸಿದರು.