‘ಹಾಸನ, ಶಿವಮೊಗ್ಗ, ಬೆಂಗಳೂರು ಉತ್ತರ ಮತ್ತು ತುಮಕೂರು ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟುಕೊಡಲು ಒಪ್ಪಿರುವ ಪಕ್ಷದ ರಾಜ್ಯ ಮುಖಂಡರು, ಬೀದರ್ನಿಂದ ಹಾವೇರಿವರೆಗೆ ಉತ್ತರ ಕರ್ನಾಟಕದ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ಮಿತ್ರ ಪಕ್ಷವನ್ನು ಕೋರಬಹುದು. ಜಗ್ಗದಿದ್ದರೆ ಚೌಕಾಶಿ ಮಾಡಿ ಒಪ್ಪಿಸಬೇಕು’ ಎಂದು ವರಿಷ್ಠರಿಗೆ ಸಲಹೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.