ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷ ಸಂದಿಗ್ಧ ಪರಿಸ್ಥಿತಿಯಲ್ಲಿದೆ: ಕಾರ್ಯಕರ್ತರಿಗೆ ದೇವೇಗೌಡರ ಪತ್ರ

Last Updated 21 ಜನವರಿ 2020, 5:09 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್‌ ಅನ್ನು ಮತ್ತೆ ಸಂಘಟಿಸಲುಮುಂದಾಗಿರುವ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರು ಇದೇ ಗುರುವಾರ (ಜ.23) ರಂದು ಸಮಾವೇಶ ಹಮ್ಮಿಕೊಂಡಿದ್ದಾರೆ.

ಪಕ್ಷದ ಚುನಾಯಿತಪ್ರತಿನಿಧಿಗಳು, ವಿವಿಧ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದವರು, ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯರ್ತರಿಗೆ ಅವರು ಪತ್ರ ಬರೆದು ಸಮಾವೇಶಕ್ಕೆ ಆಹ್ವಾನಿಸಿದ್ದಾರೆ.

ಈ ಹಿಂದೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮುಖಂಡರು ಕಾರ್ಯಕರ್ತರ ಭಾವನೆಗಳಿಗೆ ನಿರೀಕ್ಷಿತ ರೀತಿಯಲ್ಲಿ ಸ್ಪಂಧಿಸಲು ಸಾಧ್ಯವಾಗಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಚುನಾವಣೆ ಸೋಲುಗಳನ್ನು ಮೆಟ್ಟಿ ಗ್ರಾಮ ಮಟ್ಟದಿಂದ ಪಕ್ಷವನ್ನು ಬಲಪಡಿಸಬೇಕು ಎಂದು ಪತ್ರದಲ್ಲಿ ಹೇಳಿರುವ ದೇವೇಗೌಡರು, ಪಕ್ಷ ಸಂದಿಗ್ಧ ಸ್ಥಿತಿಯಲ್ಲಿದೆ ಎಂದೂ ನೋವು ತೋಡಿಕೊಂಡಿದ್ದಾರೆ. ಪಕ್ಷದ ಮುಂದಿನ ಹೋರಾಟದ ರೂಪು ರೇಷೆ ಚರ್ಚಿಸಲು ಸಮಾವೇಶ ನಡೆಸುತ್ತಿರುವುದಾಗಿ ಅವರು ತಮ್ಮ ಪತ್ರದಲ್ಲಿ ಬರೆದಿದ್ದಾರೆ.

ಇದೇ 23ರ ಬೆಳಗ್ಗೆ 11 ಗಂಟೆಗೆಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಇದರಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರೂ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT