ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶಾಂತ್ ಕಿಶೋರ್ ಜೊತೆಗೂಡಿ ಜೆಡಿಎಸ್ ಚುನಾವಣಾ ತಂತ್ರ: ಎಚ್.ಡಿ. ಕುಮಾರಸ್ವಾಮಿ

Last Updated 29 ಫೆಬ್ರುವರಿ 2020, 12:00 IST
ಅಕ್ಷರ ಗಾತ್ರ

ರಾಮನಗರ: ಮುಂದಿನ ಚುನಾವಣೆಯಲ್ಲಿ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲು ಈಗಿನಿಂದಲೇ ಸಿದ್ಧತೆ‌ ನಡೆಸಿದ್ದೇವೆ. ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಸಂಪರ್ಕದಲ್ಲಿ ಇದ್ದೇವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ರಾಮನಗರದಲ್ಲಿ ಶನಿವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಐಎಎಸ್ ಅಧಿಕಾರಿ‌ ಬದಲು ಮಂತ್ರಿ ಮನೆಯ ಜವಾನರಾಗಿ‌ ಕೆಲಸ ಮಾಡುತ್ತಿದ್ದಾರೆ‌. ಕೋರ್ಟ್ ಆದೇಶಗಳನ್ನೂ ಧಿಕ್ಕರಿಸಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಜೆಡಿಎಸ್ ಕಾರ್ಯಕರ್ತರು ಟಾರ್ಗೆಟ್ ಆಗಿದ್ದಾರೆ. ಅಧಿಕಾರಿ‌ ನಡವಳಿಕೆ ಬಗ್ಗೆ ಸರ್ಕಾರದ ಗಮನಕ್ಕೂ ತಂದಿದ್ದೇನೆ ಎಂದರು.

ಮಹದಾಯಿ‌ ವಿಚಾರದಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಮುಂದಿನ ಕೆಲಸಗಳನ್ನೂ ಮಾಡಬೇಕು. ಮೇಕೆದಾಟು ಯೋಜನೆ ಬಗ್ಗೆಯೂ‌ ನೀರಾವರಿ ಸಚಿವರ ಜೊತೆ ಚರ್ಚೆ ಮಾಡಿದ್ದೇನೆ. ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ. ಇಂದಲ್ಲ ನಾಳೆ ಈ ಯೋಜನೆ ಆಗಲೇಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT