ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಮ್ಮ ಉಸಾಬರಿ ದೇವೇಗೌಡರ ಜೊತೆಗಷ್ಟೇ, ಇನ್ಯಾರೊಂದಿಗೂ ಇಲ್ಲ: ಹೊರಟ್ಟಿ ಮುನಿಸು

Last Updated 9 ಮಾರ್ಚ್ 2020, 2:25 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ರಾಜಕೀಯ ಬೇಸರ ಆಗಿದೆ. ನಮ್ಮ ಉಸಾಬರಿ ಏನಿದ್ದರೂ ದೇವೇಗೌಡರ ಜೊತೆಗೇ ಹೊರತು ಬೇರಾರ ಜೊತೆಯೂ ಇಲ್ಲ ಎನ್ನುವ ಮೂಲಕ ಜೆಡಿಎಸ್‌ ನಾಯಕ ಬಸವರಾಜ ಹೊರಟ್ಟಿ ಅವರು ಪರೋಕ್ಷವಾಗಿ ಕುಮಾರಸ್ವಾಮಿ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ಧಾರೆ.

ಹುಬ್ಬಳ್ಳಿಯಲ್ಲಿ ಎರಡು ದಿನಗಳ ಕಾಲ ನಡೆದ ಬೆಳಗಾವಿ ವಿಭಾಗಮಟ್ಟದ ಜೆಡಿಎಸ್‌ ಕಾರ್ಯಕರ್ತರ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ‘ರಾಜಕೀಯ ಬೇಸರ ಆಗಿದೆ. ಆದರೆ, ದೇವೇಗೌಡರ ಮುಖನೋಡಿ ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ. ನಮ್ಮ ಉಸಾಬರಿ ಏನಿದ್ದರೂ ದೇವೇಗೌಡರ ಜೊತೆಗೇ ಹೊರತು ಬೇರಾರ ಜೊತೆಯೂ ಇಲ್ಲ’ ಎಂದು ಹೇಳುವ ಮೂಲಕ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಅವರು ಅಸಮಾಧಾನ ವ್ಯಕ್ತಪಡಿಸಿದರು.

‘1983ರಿಂದಲೂ ಕಾಂಗ್ರೆಸ್‌, ಬಿಜೆಪಿ ಸೇರುವಂತೆ ನನಗೆ ಆಹ್ವಾನ ಬರುತ್ತಲೇ ಇದೆ. ಆದರೆ, ಅಂದಿನಿಂದ ಇಂದಿನವರೆಗೂ ನನ್ನ ಪಕ್ಷ ನಿಷ್ಠೆ ಬದಲಾಗಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT