ಹುಬ್ಬಳ್ಳಿಯಲ್ಲಿ ಎರಡು ದಿನಗಳ ಕಾಲ ನಡೆದ ಬೆಳಗಾವಿ ವಿಭಾಗಮಟ್ಟದ ಜೆಡಿಎಸ್ ಕಾರ್ಯಕರ್ತರ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ‘ರಾಜಕೀಯ ಬೇಸರ ಆಗಿದೆ. ಆದರೆ, ದೇವೇಗೌಡರ ಮುಖನೋಡಿ ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ. ನಮ್ಮ ಉಸಾಬರಿ ಏನಿದ್ದರೂ ದೇವೇಗೌಡರ ಜೊತೆಗೇ ಹೊರತು ಬೇರಾರ ಜೊತೆಯೂ ಇಲ್ಲ’ ಎಂದು ಹೇಳುವ ಮೂಲಕ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಅಸಮಾಧಾನ ವ್ಯಕ್ತಪಡಿಸಿದರು.