‘ಜೆಡಿಎಸ್ ರಾಜಕೀಯ ಪಕ್ಷದ ಗುಣಗಳನ್ನು ಕಳೆದುಕೊಳ್ಳುತ್ತಿದೆ. ಮುಕ್ತ ವಾತಾವರಣ ಇಲ್ಲ. ಅಲ್ಲದೇ ನಿಷ್ಠಾವಂತ ಕಾರ್ಯಕರ್ತರಿಗೆಪಕ್ಷದಲ್ಲಿ ಮನ್ನಣೆ ಸಿಗುತ್ತಿಲ್ಲ. ಹೀಗಾಗಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಈ ವೇಳೆ ಪಕ್ಷದ ವಿರುದ್ಧ ಆರೋಪ ಮಾಡುವುದಿಲ್ಲ. ಏಕೆಂದರೆ ನನ್ನನ್ನು ಜೆಡಿಎಸ್ ಬೆಳೆಸಿದೆ. ನಾನೂ ಪಕ್ಷ ಬೆಳೆಸಿದ್ದೇನೆ.4 ದಶಕಗಳಿಂದ ಜನತಾ ಪಕ್ಷ ಅನೇಕ ಜವಾಬ್ದಾರಿಗಳನ್ನು ನೀಡಿದ್ದು, ಸಮರ್ಥವಾಗಿ ನಿಭಾಯಿಸಿದ್ದೇನೆ’ ಎಂದು ಸ್ಮರಿಸಿದರು.