<p><strong>ಬೆಂಗಳೂರು:</strong>ಪಾದರಾಯನಪುರದ ಗಲಭೆಕೋರನ್ನು ರಾಮನಗರ ಕಾರಾಗೃಹಕ್ಕೆ ಸ್ಥಳಾಂತರಿಸುವ ಮೂಲಕ ರಾಜ್ಯ ಸರ್ಕಾರ ಅಕ್ಷಮ್ಯ ಅಪರಾಧವೆಸಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ತಕ್ಷಣವೇ ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿರುವ ಪಾದರಾಯನಪುರ ಗಲಭೆಕೋರನ್ನು ಬೇರೆಡೆಗೆ ಸ್ಥಳಾಂತರಿಸಿ ರಾಮನಗರ ಜಿಲ್ಲೆಯ ಜನತೆಯ ಆತಂಕವನ್ನು ದೂರ ಮಾಡಬೇಕು ಎಂದು ಶುಕ್ರವಾರ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.</p>.<p>ಎಚ್.ಡಿ.ಕುಮಾರಸ್ವಾಮಿ ಅವರು ಮುಂದಾಗಬಹುದಾದ ಅನಾಹುತದ ಬಗ್ಗೆ ಸರ್ಕಾರಕ್ಕೆ ಮೊದಲೇ ಕಿವಿ ಹಿಂಡಿದ್ದರು. ಜಾಣಕಿವುಡು ಪ್ರದರ್ಶಿಸಿದ ರಾಜ್ಯಸರ್ಕಾರ ಕರೋನ ಸೋಂಕನ್ನು ಜಿಲ್ಲೆಗೆ ಹಂಚಿದ್ದು ಸರೀನಾ? ಇದರ ಹಿಂದೆ ಕಾಣದ ಕೈಗಳ ಷಡ್ಯಂತ್ರವಿದೆ ಎಂದು ಅನಿತಾ ಕುಮಾರಸ್ವಾಮಿ ಆರೋಪಿಸಿದ್ದಾರೆ.</p>.<p>ಜಿಲ್ಲಾ ಉಸ್ತುವಾರಿ ಸಚಿವ, ಉಪಮುಖ್ಯಮಂತ್ರಿ ಹಾಗೂ ವೈದ್ಯರು ಆಗಿರುವಡಾ.ಅಶ್ವಥ್ ನಾರಾಯಣ ಅವರು ಹಾರಿಕೆಯ ಹೇಳಿಕೆಗಳ ನೀಡುವುದು ಬಿಟ್ಟು ಜವಾಬ್ದಾರಿತನದಿಂದ ವರ್ತಿಸಲಿ. ವಾಸ್ತವ ಸ್ಥಿತಿಯನ್ನು ಅರಿತು ಪ್ರತಿಕ್ರಿಯಿಸಲಿ. ಜಿಲ್ಲೆಯ ಜನತೆಯೊಂದಿಗೆ ಚೆಲ್ಲಾಟ ಮಾಡುವುದನ್ನು ಬಿಡಲಿ ಎಂದು ಅನಿತಾ ಕುಮಾರಸ್ವಾಮಿ ಕಿಡಿಕಾರಿದ್ದಾರೆ.</p>.<p>ಸರ್ಕಾರದ ಬೇಜವಾಬ್ದಾರಿತನವನ್ನು ಇನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ತಕ್ಷಣ ರಾಮನಗರ ಮಾರ್ವಾಡಿ ಕೈದಿಗಳನ್ನು ಬೇರೆಡೆಗೆ ಸ್ಥಳಾಂತರಿಸಿ, ಜಿಲ್ಲೆಯಾದ್ಯಂತ ಕರೋನಾ ಸೋಂಕು ಹರಡದಂತೆ ಅಗತ್ಯ ವೈದ್ಯಕೀಯ ಮುನ್ನೆಚ್ಚರಿಕೆ ವಹಿಸಬೇಕು ಇಲ್ಲದಿದ್ದರೆ ಬೀದಿಗಿಳಿದು ಜಿಲ್ಲೆಯ ಜನತೆಯ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.</p>.<p>ರಾಮನಗರ ಜೈಲಿನಲ್ಲಿ ಇರಿಸಲಾದ ಕೈದಿಗಳಲ್ಲಿ ಇಬ್ಬರಿಗೆ ಮಾತ್ರವಲ್ಲದೆ ಇತರ ಕೆಲವರಿಗೂ ಕರೋನಾ ಹಬ್ಬಿರುವ ಮಾಹಿತಿ ಇದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಪಾದರಾಯನಪುರದ ಗಲಭೆಕೋರನ್ನು ರಾಮನಗರ ಕಾರಾಗೃಹಕ್ಕೆ ಸ್ಥಳಾಂತರಿಸುವ ಮೂಲಕ ರಾಜ್ಯ ಸರ್ಕಾರ ಅಕ್ಷಮ್ಯ ಅಪರಾಧವೆಸಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ತಕ್ಷಣವೇ ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿರುವ ಪಾದರಾಯನಪುರ ಗಲಭೆಕೋರನ್ನು ಬೇರೆಡೆಗೆ ಸ್ಥಳಾಂತರಿಸಿ ರಾಮನಗರ ಜಿಲ್ಲೆಯ ಜನತೆಯ ಆತಂಕವನ್ನು ದೂರ ಮಾಡಬೇಕು ಎಂದು ಶುಕ್ರವಾರ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.</p>.<p>ಎಚ್.ಡಿ.ಕುಮಾರಸ್ವಾಮಿ ಅವರು ಮುಂದಾಗಬಹುದಾದ ಅನಾಹುತದ ಬಗ್ಗೆ ಸರ್ಕಾರಕ್ಕೆ ಮೊದಲೇ ಕಿವಿ ಹಿಂಡಿದ್ದರು. ಜಾಣಕಿವುಡು ಪ್ರದರ್ಶಿಸಿದ ರಾಜ್ಯಸರ್ಕಾರ ಕರೋನ ಸೋಂಕನ್ನು ಜಿಲ್ಲೆಗೆ ಹಂಚಿದ್ದು ಸರೀನಾ? ಇದರ ಹಿಂದೆ ಕಾಣದ ಕೈಗಳ ಷಡ್ಯಂತ್ರವಿದೆ ಎಂದು ಅನಿತಾ ಕುಮಾರಸ್ವಾಮಿ ಆರೋಪಿಸಿದ್ದಾರೆ.</p>.<p>ಜಿಲ್ಲಾ ಉಸ್ತುವಾರಿ ಸಚಿವ, ಉಪಮುಖ್ಯಮಂತ್ರಿ ಹಾಗೂ ವೈದ್ಯರು ಆಗಿರುವಡಾ.ಅಶ್ವಥ್ ನಾರಾಯಣ ಅವರು ಹಾರಿಕೆಯ ಹೇಳಿಕೆಗಳ ನೀಡುವುದು ಬಿಟ್ಟು ಜವಾಬ್ದಾರಿತನದಿಂದ ವರ್ತಿಸಲಿ. ವಾಸ್ತವ ಸ್ಥಿತಿಯನ್ನು ಅರಿತು ಪ್ರತಿಕ್ರಿಯಿಸಲಿ. ಜಿಲ್ಲೆಯ ಜನತೆಯೊಂದಿಗೆ ಚೆಲ್ಲಾಟ ಮಾಡುವುದನ್ನು ಬಿಡಲಿ ಎಂದು ಅನಿತಾ ಕುಮಾರಸ್ವಾಮಿ ಕಿಡಿಕಾರಿದ್ದಾರೆ.</p>.<p>ಸರ್ಕಾರದ ಬೇಜವಾಬ್ದಾರಿತನವನ್ನು ಇನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ತಕ್ಷಣ ರಾಮನಗರ ಮಾರ್ವಾಡಿ ಕೈದಿಗಳನ್ನು ಬೇರೆಡೆಗೆ ಸ್ಥಳಾಂತರಿಸಿ, ಜಿಲ್ಲೆಯಾದ್ಯಂತ ಕರೋನಾ ಸೋಂಕು ಹರಡದಂತೆ ಅಗತ್ಯ ವೈದ್ಯಕೀಯ ಮುನ್ನೆಚ್ಚರಿಕೆ ವಹಿಸಬೇಕು ಇಲ್ಲದಿದ್ದರೆ ಬೀದಿಗಿಳಿದು ಜಿಲ್ಲೆಯ ಜನತೆಯ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.</p>.<p>ರಾಮನಗರ ಜೈಲಿನಲ್ಲಿ ಇರಿಸಲಾದ ಕೈದಿಗಳಲ್ಲಿ ಇಬ್ಬರಿಗೆ ಮಾತ್ರವಲ್ಲದೆ ಇತರ ಕೆಲವರಿಗೂ ಕರೋನಾ ಹಬ್ಬಿರುವ ಮಾಹಿತಿ ಇದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>