ದೇವೇಗೌಡರು ಈ ಗ್ರಾಮಗಳಲ್ಲಿ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಪರ ಪ್ರಚಾರ ನಡೆಸಿದ್ದು, ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಹೀಗೆ ಬಂದವರಿಗೆ ತಲಾ ₹150–200 ಹಂಚಿಕೆ ಮಾಡಲಾಯಿತು ಎಂದು ಆರೋಪಿಸಲಾಗಿದೆ. ಜೆಡಿಎಸ್–ಕಾಂಗ್ರೆಸ್ ಶಾಲು ಹಾಕಿಕೊಂಡು ಜನರಿಗೆ ಹಣ ನೀಡುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರಗೊಂಡಿವೆ. ಆದರೆ ಈ ಆರೋಪವನ್ನು ಸ್ಥಳೀಯ ಜೆಡಿಎಸ್ ಮುಖಂಡರು ನಿರಾಕರಿಸಿದ್ದು, ‘ಎಲ್ಲಿಯೂ ಹಣ ಹಂಚಿಕೆ ಮಾಡಲಾಗಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.