ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌.ಕೆ.ಕುಮಾರಸ್ವಾಮಿ ಜೆಡಿಎಸ್‌ ಅಧ್ಯಕ್ಷ, ಮಧು ಬಂಗಾರಪ್ಪ ಕಾರ್ಯಾಧ್ಯಕ್ಷ

Last Updated 4 ಜುಲೈ 2019, 7:54 IST
ಅಕ್ಷರ ಗಾತ್ರ

ಬೆಂಗಳೂರು:ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷರಾಗಿ ಸಕಲೇಶಪುರದ ಶಾಸಕಎಚ್‌.ಕೆ.ಕುಮಾರಸ್ವಾಮಿ ಹಾಗೂ ಮಧು ಬಂಗಾರಪ್ಪ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಇದೇ ವೇಳೆ ಪಕ್ಷದ ರಾಜ್ಯ ಘಟಕಕ್ಕೆ ವಿವಿಧ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಮಾಜಿ ಸಚಿವಎನ್‌.ಎಂ.ನಬಿ, ಶಾಸಕ ಕೆ.ಗೋಪಾಲಯ್ಯ, ಆರ್‌.ಮಂಜುನಾಥ್ ಅವರನ್ನು ಹಿರಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮಾಜಿ ಶಾಸಕ ಸುರೇಶ್‌ ಬಾಬು ರಾಜ್ಯ ಬೂತ್‌ ಸಮಿತಿಯ ಅಧ್ಯಕ್ಷ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ನಾಸಿರ್ ಬಾಗವಾನ್‌ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಯುವ ಜನತಾ ದಳದ ಅಧ್ಯಕ್ಷರಾಗಿ ನಿಖಿಲ್‌ ಕುಮಾರ ಸ್ವಾಮಿ, ಕಾರ್ಯಾಧ್ಯಕ್ಷರಾಗಿ ನೂರ್ ಅಹಮ್ಮದ್, ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಶರಣಗೌಡ ಕಂದಕೂರು ನೇಮಕವಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT