ಸ್ವಂತ ಬಲದಿಂದ ಆಯ್ಕೆ ಆಗುವಷ್ಟು ಶಾಸಕರ ಸಂಖ್ಯೆ ಇಲ್ಲದಿರುವ ಕಾರಣ, ಕಾಂಗ್ರೆಸ್ ಬೆಂಬಲ ನೀಡಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿಯವರು ದೂರವಾಣಿ ಕರೆ ಮಾಡಿ, ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಿದ ಕಾರಣ ಮತ್ತು ದೇಶದ ಹಲವು ನಾಯಕರು ಮನವಿ ಮಾಡಿದ್ದರಿಂದ ದೇವೇಗೌಡರು ಸ್ಪರ್ಧೆಗೆ ಒಪ್ಪಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.