ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಂದಾಲ್ ಕಂಪನಿಗೆ ಜಮೀನು| ಸರ್ಕಾರದ ತೀರ್ಮಾನ ಖಂಡಿಸಿ ಬಿಜೆಪಿ ಪ್ರತಿಭಟನೆ

Last Updated 13 ಜೂನ್ 2019, 9:57 IST
ಅಕ್ಷರ ಗಾತ್ರ

ಬೆಂಗಳೂರು: ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನು ನೀಡುವ ರಾಜ್ಯ ಸರ್ಕಾರದ ತೀರ್ಮಾನ ಖಂಡಿಸಿಹಾಗೂ ಮೈತ್ರಿ ಸರ್ಕಾರದ ವೈಫಲ್ಯಗಳ ವಿರುದ್ಧ ರಾಜ್ಯ ಬಿಜೆಪಿ ನಾಯಕರು ನಗರದಲ್ಲಿ ಇಂದುಪ್ರತಿಭಟನೆ ನಡೆಸಿದರು.

ಮಾಜಿಉಪಮುಖ್ಯಮಂತ್ರಿಆರ್.ಅಶೋಕ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ,ತಮ್ಮೇಶ್ ಗೌಡ, ಸಂಸದರಾದ ತೇಜಸ್ವಿ ಸೂರ್ಯ, ಬೆಂಗಳೂರು ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಸಪ್ತಗಿರಿ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ವಿಧಾನಸೌಧ ಮುತ್ತಿಗೆಗೆ ತೆರಳುತ್ತಿದ್ದ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT