ಸುಪ್ರೀಂ ಕೋರ್ಟ್, ‘ಪರಿಸರ ಸೂಕ್ಷ್ಮ ವಲಯಗಳಲ್ಲಿ ಯಾವುದೇ ವಾಣಿಜ್ಯ ಮತ್ತು ಇತರ ಚಟುವಟಿಕೆ ನಡೆಸಬಾರದು’ ಎಂದು ಡಿ.10ರಂದು ಆದೇಶ ಹೊರಡಿಸಿತ್ತು. ಗಣಿಗಾರಿಕೆ, ಸಾ ಮಿಲ್, ಪರಿಸರ ಮಾಲಿನ್ಯಕ್ಕೆ ಕಾರಣ ವಾಗುವ ಕೈಗಾರಿಕೆಗಳನ್ನು ಆರಂಭಿಸಲು, ಕಟ್ಟಿಗೆಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು,ಬೃಹತ್ ಜಲ ವಿದ್ಯುತ್ ಉತ್ಪಾದನಾ ಘಟಕಗಳನ್ನು ಪರಿಸರ ಸೂಕ್ಷ್ಮವಲಯದಲ್ಲಿ ಸ್ಥಾಪಿಸಲು ಅವಕಾಶ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿತ್ತು.