ಬೆಂಗಳೂರು: ಅಂಬಿಡೆಂಟ್ ಪ್ರಕರಣದಲ್ಲಿ ಪತ್ರಕರ್ತರ ಪಾತ್ರವೂ ಇದೆ ಎನ್ನುವ ವಿಚಾರ ಬಹುದಿನಗಳಿಂದ ಹರಿದಾಡುತ್ತಿದ್ದು, ಸಿಸಿಬಿ ಪೊಲೀಸರು ಈ ಸಂಬಂಧ ಸುದ್ದಿ ವಾಹಿನಿಯೊಂದರ ಮುಖ್ಯಸ್ಥ ವಿಜಯ್ ಟಾಟಾ ಅವರ ವಿಚಾರಣೆ ನಡೆಸಿದ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಪ್ರಕರಣದಲ್ಲಿ ಮತ್ತೂ ಮೂವರು ಪತ್ರಕರ್ತರು ಶಾಮೀಲಾಗಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳು ಮತ್ತು ವಾಟ್ಸಾಪ್ ಗ್ರೂಪ್ಗಳಲ್ಲಿ ಸುದ್ದಿಹರಿದಾಡುತ್ತಿದೆ.
ಈ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಸಿಬಿ ಡಿಸಿಪಿ ಗಿರೀಶ್, ‘ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ಟಾಟಾ ಹೊರತುಪಡಿಸಿ ಯಾವುದೇ ಪತ್ರಕರ್ತರ ವಿಚಾರಣೆ ನಡೆಸಿಲ್ಲ’ ಎಂದು ಹೇಳಿದರು.