ಬೆಂಗಳೂರು: ಒಂದೇ ದಿನದಲ್ಲಿ 106 ಪ್ರಕರಣಗಳನ್ನು ವಿಲೇವಾರಿ ಮಾಡುವ ಮೂಲಕ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಗಮನ ಸೆಳೆದಿದ್ದಾರೆ.
ಬೆಂಗಳೂರು ಪ್ರಧಾನ ಪೀಠದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅವರು, ಶುಕ್ರವಾರ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಬಿಡಿಎ), ಭೂ ಸ್ವಾಧೀನ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ 106 ಅರ್ಜಿಗಳನ್ನು ಇತ್ಯರ್ಥಗೊಳಿಸಿದರು. ಇವೆಲ್ಲವೂ 2013ರಿಂದ ಬಾಕಿ ಉಳಿದಿದ್ದ ಅರ್ಜಿಗಳಾಗಿದ್ದವು.
ಬೆಂಗಳೂರು ಮತ್ತು ಧಾರವಾಡ ಪೀಠಗಳಲ್ಲಿ ಒಟ್ಟು 2,300ಕ್ಕೂ ಹೆಚ್ಚು ರಿಟ್ ಅರ್ಜಿ ವಿಲೇವಾರಿ ಮಾಡಿದ್ದಾರೆ.