ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಐಎಂಎ ವಂಚನೆ ಪ್ರಕರಣದಲ್ಲಿ ಸಿಲುಕಿದ ಜಮೀರ್ ಅಹಮದ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ನೋಟಿಸ್ ಜಾರಿ ಮಾಡಿದೆ. ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು. ಎಸ್ಐಟಿ ತನಿಖೆಯಿಂದ ಸತ್ಯ ಹೊರಬರಲು ಸಾಧ್ಯವಿಲ್ಲ. ಈ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸಬೇಕು’ ಎಂದು ಒತ್ತಾಯಿಸಿದರು.