ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಗವಾಡ: ಹುಕ್ಕೇರಿ ಇಲ್ಲವೇ ಕಾಗೆಗೆ ಟಿಕೆಟ್‌

ಶಾಸಕ ಸತೀಶ ಜಾರಕಿಹೊಳಿ ಹೇಳಿಕೆ
Last Updated 25 ಸೆಪ್ಟೆಂಬರ್ 2019, 15:33 IST
ಅಕ್ಷರ ಗಾತ್ರ

ಮೋಳೆ: ‘ಕಾಗವಾಡ ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಕಾಶ ಹುಕ್ಕೇರಿ ಅಥವಾ ಭರಮಗೌಡ (ರಾಜು) ಕಾಗೆ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ದೊರೆಯುವ ಸಾಧ್ಯತೆ ಇದೆ’ ಎಂದು ಶಾಸಕ ಸತೀಶ ಜಾರಕಿಹೊಳಿ ತಿಳಿಸಿದರು.

ಕಾಗವಾಡ ತಾಲ್ಲೂಕು ಮಂಗಸೂಳಿಯಲ್ಲಿ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಆಲಿಸಿದ ನಂತರ ಅವರು ಮಾತನಾಡಿದರು.

‘ಪಕ್ಷದ ಅಭ್ಯರ್ಥಿಯಾಗಲು ಐವರು ಇಚ್ಛೆ ವ್ಯಕ್ತಪಡಿಸಿದ್ದಾರೆ. ಯಾರಿಗೇ ಟಿಕೆಟ್‌ ಸಿಕ್ಕರೂ ಗೆಲ್ಲಿಸಲು ಕಾರ್ಯಕರ್ತರು ಒಟ್ಟಾಗಿ ದುಡಿಯಬೇಕು’ ಎಂದು ಸೂಚಿಸಿದರು.

‘ಶ್ರೀಮಂತ ಪಾಟೀಲ ಅವರನ್ನು ಗೆಲ್ಲಿಸಲು ಬಹಳ ಶ್ರಮಿಸಿದೆವು. ಆದರೆ, ಅವರು ಸ್ವಾರ್ಥಕ್ಕಾಗಿ ಪಕ್ಷವನ್ನು ಬಲಿ ಕೊಟ್ಟು ಓಡಿ ಹೋದರು. ಅವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ. ಆದರೆ, ಪಕ್ಷಕ್ಕಾಗಿ ದುಡಿದವರು ಹಾಗೂ ಸ್ಥಳೀಯರಿಗೆ ಟಿಕೆಟ್‌ ಕೊಡಬೇಕು. ಹೊರಗಿನವರಿಗೆ ಮಣೆ ಹಾಕಬಾರದು’ ಎಂದು ಕಾರ್ಯಕರ್ತರು ಒತ್ತಾಯಿಸಿದರು.

‘ರಾಜ್ಯ, ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಅನರ್ಹ ಶಾಸಕರಿಗೆ ನೆರೆ ಸಂತ್ರಸ್ತರ ಶಾಪ ತಟ್ಟಲಿದೆ’ ಎಂದು ಶಾಸಕ ಎಂ.ಬಿ. ಪಾಟೀಲ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT