ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪರಮೇಶ್ವರ ಶಿಕ್ಷಣ ಸಂಸ್ಥೆ ಮೂಲಕ ರಾಜಕೀಯಕ್ಕೆ ಬಂದರೆ, ಸಿದ್ದರಾಮಯ್ಯ ಜನರ ಮಧ್ಯೆ ಇದ್ದು ಬಂದವರು. ಎಲ್ಲರ ಸಹಕಾರದಿಂದ ಅಧಿಕಾರ ಪಡೆದು ಅದನ್ನು ಅನುಭವಿಸಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದಾಗ ಎಲ್ಲರೂ ಬಹಳ ಉತ್ಸಾಹದಿಂದ ಇರುತ್ತಾರೆ. ಅಧಿಕಾರ ಇಲ್ಲದಾಗ ಎಲ್ಲಿಗೆ ಹೋಗುತ್ತಾರೋ ಗೊತ್ತೇ ಆಗುವುದಿಲ್ಲ’ ಎಂದು ಅವರು ಹೇಳಿದರು.