‘ಈ ವಿಷಯ ಬುಧವಾರವಷ್ಟೇ ತಿಳಿಯಿತು. ನಮಗೂ ಅಚ್ಚರಿಯಾಗಿದೆ. ಕಣ್ತಪ್ಪಿನಿಂದ ಆಗಿರಬಹುದು. ಸ್ವೀಪ್ ಚಟುವಟಿಕೆ ಉಸ್ತುವಾರಿ ಹೊತ್ತಿರುವ ಜಿಲ್ಲಾ ಪಂಚಾಯಿತಿ ಸಿಇಒ ಜೊತೆ ಮಾತನಾಡಿದ್ದೇನೆ. ಈ ಕುರಿತು ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಾಗುವುದು. ಜಿಲ್ಲೆಯಾದ್ಯಂತ ಪ್ರದರ್ಶನ ಮಾಡಿರುವ ಕಟೌಟ್, ಬ್ಯಾನರ್, ಬಂಟಿಂಗ್ಸ್, ಕರಪತ್ರಗಳ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು. ರಾತ್ರಿಯೇ ಎಲ್ಲವನ್ನು ತೆರವುಗೊಳಿಸಲಾಗುವುದು’ ಎಂದು ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುಶ್ರೀ ತಿಳಿಸಿದರು.