<p><strong>ಕಲಬುರ್ಗಿ: </strong>ಸೇಡಂ ತಾಲ್ಲೂಕಿನ ಕೋಲ್ಕುಂದಾ ದೊಡ್ಡ ತಾಂಡಾದಲ್ಲಿ ಕೊರೊನಾ ಸೋಂಕಿತ ಯುವತಿಯನ್ನು ಕಲಬುರ್ಗಿ ಆಸ್ಪತ್ರೆಗೆ ದಾಖಲಿಸುವುದಕ್ಕಾಗಿ ಕರೆತರಲು ತೆರಳಿದ್ದ ಸಿಬ್ಬಂದಿ ಹಾಗೂ ತಾಂಡಾ ನಿವಾಸಿಗಳ ಮಧ್ಯೆ ಘರ್ಷಣೆ ನಡೆದಿದ್ದು, ಇದರಲ್ಲಿ ಪೊಲೀಸ್ ಕಾನ್ಸ್ಟೆಬಲ್ ಹಾಗೂ ತಾಂಡಾ ನಿವಾಸಿ ಗಾಯಗೊಂಡಿದ್ದಾರೆ.</p>.<p>ಗುರುವಾರ ರಾತ್ರಿ ಆಂಬುಲೆನ್ಸ್ನೊಂದಿಗೆ ಪೊಲೀಸ್ ರಕ್ಷಣೆಯಲ್ಲಿ ತೆರಳಿದ್ದ ಆರೋಗ್ಯ ಸಿಬ್ಬಂದಿ, ಸೋಂಕಿತ 17 ವರ್ಷದ ಯುವತಿ<br />ಯನ್ನು ಕಳುಹಿಸಿ ಕೊಡುವಂತೆ ಹೇಳಿದಾಗ ಕುಟುಂಬದವರು ಒಪ್ಪಿಲ್ಲ. ಮಾತಿಗೆ ಮಾತು ಬೆಳೆದು ಘರ್ಷಣೆ ನಡೆದಿದೆ. ಗ್ರಾಮಸ್ಥರು ಅಟ್ಟಿಸಿಕೊಂಡು ಬರುತ್ತಿದ್ದ ವೇಳೆ ಕೆಳಗೆ ಬಿದ್ದ ಪೊಲೀಸ್ ಕಾನ್ಸ್ಟೆಬಲ್ಕಾಲಿಗೆ ಪೆಟ್ಟಾಗಿದೆ. ಕಲ್ಲು ತೂರಾಟ ನಡೆಸಿದ್ದರಿಂದ ಆಂಬುಲೆನ್ಸ್ನ ಮುಂಭಾಗದ ಗಾಜು ಒಡೆದಿದೆ.</p>.<p>ಶುಕ್ರವಾರ ಬೆಳಿಗ್ಗೆತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ ಅವರು ಹೆಚ್ಚಿನ ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಕರೆದುಕೊಂಡು ಹೋಗಿ ಕುಟುಂಬದ ಸದಸ್ಯರ ಮನವೊಲಿಸಿ ಯುವತಿಯನ್ನು ಕರೆತಂದು ಆಸ್ಪತ್ರೆಗೆ ದಾಖಲಿಸಿದರು.</p>.<p>ತಾಂಡಾದ ಶ್ರೀನಿವಾಸ ನಾಯಕ ಸೇರಿದಂತೆ 17 ಜನರ ವಿರುದ್ಧ ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಪ್ರಕರಣ<br />ದಾಖಲಿಸಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಸೇಡಂ ತಾಲ್ಲೂಕಿನ ಕೋಲ್ಕುಂದಾ ದೊಡ್ಡ ತಾಂಡಾದಲ್ಲಿ ಕೊರೊನಾ ಸೋಂಕಿತ ಯುವತಿಯನ್ನು ಕಲಬುರ್ಗಿ ಆಸ್ಪತ್ರೆಗೆ ದಾಖಲಿಸುವುದಕ್ಕಾಗಿ ಕರೆತರಲು ತೆರಳಿದ್ದ ಸಿಬ್ಬಂದಿ ಹಾಗೂ ತಾಂಡಾ ನಿವಾಸಿಗಳ ಮಧ್ಯೆ ಘರ್ಷಣೆ ನಡೆದಿದ್ದು, ಇದರಲ್ಲಿ ಪೊಲೀಸ್ ಕಾನ್ಸ್ಟೆಬಲ್ ಹಾಗೂ ತಾಂಡಾ ನಿವಾಸಿ ಗಾಯಗೊಂಡಿದ್ದಾರೆ.</p>.<p>ಗುರುವಾರ ರಾತ್ರಿ ಆಂಬುಲೆನ್ಸ್ನೊಂದಿಗೆ ಪೊಲೀಸ್ ರಕ್ಷಣೆಯಲ್ಲಿ ತೆರಳಿದ್ದ ಆರೋಗ್ಯ ಸಿಬ್ಬಂದಿ, ಸೋಂಕಿತ 17 ವರ್ಷದ ಯುವತಿ<br />ಯನ್ನು ಕಳುಹಿಸಿ ಕೊಡುವಂತೆ ಹೇಳಿದಾಗ ಕುಟುಂಬದವರು ಒಪ್ಪಿಲ್ಲ. ಮಾತಿಗೆ ಮಾತು ಬೆಳೆದು ಘರ್ಷಣೆ ನಡೆದಿದೆ. ಗ್ರಾಮಸ್ಥರು ಅಟ್ಟಿಸಿಕೊಂಡು ಬರುತ್ತಿದ್ದ ವೇಳೆ ಕೆಳಗೆ ಬಿದ್ದ ಪೊಲೀಸ್ ಕಾನ್ಸ್ಟೆಬಲ್ಕಾಲಿಗೆ ಪೆಟ್ಟಾಗಿದೆ. ಕಲ್ಲು ತೂರಾಟ ನಡೆಸಿದ್ದರಿಂದ ಆಂಬುಲೆನ್ಸ್ನ ಮುಂಭಾಗದ ಗಾಜು ಒಡೆದಿದೆ.</p>.<p>ಶುಕ್ರವಾರ ಬೆಳಿಗ್ಗೆತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ ಅವರು ಹೆಚ್ಚಿನ ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಕರೆದುಕೊಂಡು ಹೋಗಿ ಕುಟುಂಬದ ಸದಸ್ಯರ ಮನವೊಲಿಸಿ ಯುವತಿಯನ್ನು ಕರೆತಂದು ಆಸ್ಪತ್ರೆಗೆ ದಾಖಲಿಸಿದರು.</p>.<p>ತಾಂಡಾದ ಶ್ರೀನಿವಾಸ ನಾಯಕ ಸೇರಿದಂತೆ 17 ಜನರ ವಿರುದ್ಧ ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಪ್ರಕರಣ<br />ದಾಖಲಿಸಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>