ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ: ಸಿಬ್ಬಂದಿ ಬೆನ್ನಟ್ಟಿದ ಸ್ಥಳೀಯರು

ಕೊರೊನಾ ಸೋಂಕಿತೆ ಕರೆತರಲು ಹೋದಾಗ ಘರ್ಷಣೆ
Last Updated 19 ಜೂನ್ 2020, 21:16 IST
ಅಕ್ಷರ ಗಾತ್ರ

ಕಲಬುರ್ಗಿ: ಸೇಡಂ ತಾಲ್ಲೂಕಿನ ಕೋಲ್ಕುಂದಾ ದೊಡ್ಡ ತಾಂಡಾದಲ್ಲಿ ಕೊರೊನಾ ಸೋಂಕಿತ ಯುವತಿಯನ್ನು ಕಲಬುರ್ಗಿ ಆಸ್ಪತ್ರೆಗೆ ದಾಖಲಿಸುವುದಕ್ಕಾಗಿ ಕರೆತರಲು ತೆರಳಿದ್ದ ಸಿಬ್ಬಂದಿ ಹಾಗೂ ತಾಂಡಾ ನಿವಾಸಿಗಳ ಮಧ್ಯೆ ಘರ್ಷಣೆ ನಡೆದಿದ್ದು, ಇದರಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್ ಹಾಗೂ ತಾಂಡಾ ನಿವಾಸಿ ಗಾಯಗೊಂಡಿದ್ದಾರೆ.

ಗುರುವಾರ ರಾತ್ರಿ ಆಂಬುಲೆನ್ಸ್‌ನೊಂದಿಗೆ ಪೊಲೀಸ್‌ ರಕ್ಷಣೆಯಲ್ಲಿ ತೆರಳಿದ್ದ ಆರೋಗ್ಯ ಸಿಬ್ಬಂದಿ, ಸೋಂಕಿತ 17 ವರ್ಷದ ಯುವತಿ
ಯನ್ನು ಕಳುಹಿಸಿ ಕೊಡುವಂತೆ ಹೇಳಿದಾಗ ಕುಟುಂಬದವರು ಒಪ್ಪಿಲ್ಲ. ಮಾತಿಗೆ ಮಾತು ಬೆಳೆದು ಘರ್ಷಣೆ ನಡೆದಿದೆ. ಗ್ರಾಮಸ್ಥರು ಅಟ್ಟಿಸಿಕೊಂಡು ಬರುತ್ತಿದ್ದ ವೇಳೆ ಕೆಳಗೆ ಬಿದ್ದ ಪೊಲೀಸ್‌ ಕಾನ್‌ಸ್ಟೆಬಲ್‌ಕಾಲಿಗೆ ಪೆಟ್ಟಾಗಿದೆ. ಕಲ್ಲು ತೂರಾಟ ನಡೆಸಿದ್ದರಿಂದ ಆಂಬುಲೆನ್ಸ್‌ನ ಮುಂಭಾಗದ ಗಾಜು ಒಡೆದಿದೆ.

ಶುಕ್ರವಾರ ಬೆಳಿಗ್ಗೆತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ ಅವರು ಹೆಚ್ಚಿನ ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಕರೆದುಕೊಂಡು ಹೋಗಿ ಕುಟುಂಬದ ಸದಸ್ಯರ ಮನವೊಲಿಸಿ ಯುವತಿಯನ್ನು ಕರೆತಂದು ಆಸ್ಪತ್ರೆಗೆ ದಾಖಲಿಸಿದರು.

ತಾಂಡಾದ ಶ್ರೀನಿವಾಸ ನಾಯಕ ಸೇರಿದಂತೆ 17 ಜನರ ವಿರುದ್ಧ ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಪ್ರಕರಣ
ದಾಖಲಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT