ತಕರಾರು ಇಲ್ಲ ಎಂದಿದ್ದ ಕೇಂದ್ರ: 2019ರ ಅಕ್ಟೋಬರ್ 17ರಂದು ಕೇಂದ್ರ ಅರಣ್ಯ, ಪರಿಸರ ಇಲಾಖೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು, ‘ಇದು ಕುಡಿಯುವ ನೀರು ಯೋಜನೆ ಆಗಿರುವುದರಿಂದ ಪರಿಸರ ಪರಿಣಾಮ ಅಧ್ಯಯನ ಅಧಿಸೂಚನೆ–2006 ರ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ಯೋಜನೆ ಅನುಷ್ಠಾನಕ್ಕೆ ಯಾವುದೇ ತಕರಾರು ಇಲ್ಲ’ ಎಂದು ಹೇಳಿತ್ತು.