ಕಳಸಾ- ಬಂಡೂರಿ ಕಾಮಗಾರಿಯನ್ನು ರದ್ದುಗೊಳಿಸಬೇಕು, ಆ ಯೋಜನೆಯ ಬಗ್ಗೆ ಮರು ಪರಿಶೀಲನೆ ನಡೆಸಲು ಸಮಿತಿ ರಚಿಸಬೇಕು ಎಂದು ಗೋವಾದ ಸರ್ವಪಕ್ಷದ ನಿಯೋಗವು ಇತ್ತೀಚೆಗೆ ಕೇಂದ್ರವನ್ನು ಒತ್ತಾಯಿಸಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಕೇಂದ್ರದ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು, ಮರು ಪರಿಶೀಲನೆಗೆ ಸಮಿತಿ ರಚಿಸುವುದಾಗಿ ಗೋವಾ ಸರ್ಕಾರಕ್ಕೆ ಎರಡು ದಿನಗಳ ಹಿಂದೆ ಪತ್ರ ಬರೆದಿದ್ದರು. ಆದರೆ ಯೋಜನೆ ರದ್ದುಪಡಿಸಲು ನಿರಾಕರಿಸಿದ್ದರು.